ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರನವರ ಮತ್ತೊಂದು ವಿಡಿಯೋ ವೈರಲ್, ಆಗಿದ್ದೇನು?
ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್ನನ್ನು ರೂಮಿನಲ್ಲಿ ಕೂಡಿ ಹಾಕಿ ಹೊಡೆಯಿರಿ ಎಂದು ಕಾಂಗ್ರೆಸ್ ಶಾಸಕ ಹೇಳಿಕೆ ನೀಡಿದ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಚಿತ್ರದುರ್ಗ, (ಆಗಸ್ಟ್ 06): ವಿದ್ಯಾರ್ಥಿನಿಲಯದಲ್ಲಿ ಕಳಪೆ ಗುಣಮಟ್ಟದ ಊಟ-ತಿಂಡಿ ನೀಡಿದರೆ ಹಾಸ್ಟೆಲ್ ವಾರ್ಡನ್ನನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಥಳಿಸುವಂತೆ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಹೇಳಿದ್ದ ವಿಡಿಯೋ ಸಾಮಾಜಿಕ ಜಲಾತಾಣಗಳಲ್ಲಿ ವೈರಲ್ ಆಗಿದೆ. ಮಕ್ಕಳಿಗೆ ಈ ರೀತಿ ಪ್ರಚೋದನೆ ನೀಡಿವುದು ತಪ್ಪು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆಗಳು ವ್ಯಕ್ತವಾಗುತ್ತಿವೆ. ಇದರ ಬೆನ್ನಲ್ಲೇ ಇದೀಗ ಕೆ.ಸಿ.ವಿರೇಂದ್ರ ಪಪ್ಪಿ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: ಚಿತ್ರದುರ್ಗ: ರೂಂಗೆ ಹಾಕಿ ವಾರ್ಡನ್ಗೆ ಬಾರಿಸಿ ಎಂದಿದ್ದ ಶಾಸಕ ವೀರೇಂದ್ರ ಪಪ್ಪಿ ವಿಡಿಯೋ ವೈರಲ್
ಹಿರೇಗುಂಟನೂರಿನಲ್ಲಿ ಮದ್ಯ ಮಾರಾಟ ತಡೆಗೆ ಕ್ರಮ ಕೈಗೊಳ್ಳುವಂತೆ ಮಹಿಳೆಯರು ಕೆ.ಸಿ.ವಿರೇಂದ್ರ ಪಪ್ಪಿ ಅವರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಮದ್ಯ ಮಾರಾಟ ಮಾಡುವವರ ಮನೆಗೆ ಬೆಂಕಿ ಹಾಕ್ತೇವೆ ಎಂದು ಮಹಿಳೆಯರು ಹೇಳಿದ್ದಾರೆ. ಇದಕ್ಕೆ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ಪ್ರತಿಕ್ರಿಯಿಸಿ, ನೀನು ಬೆಂಕಿ ಇಡಮ್ಮ ನಾನಿದ್ದೇನೆ, ಯಾಕೆ ಯೋಚನೆ ಮಾಡ್ತೀಯಾ ಎಂದಿದ್ದಾರೆ. ಇದೀಗ ಈ ವಿಡಿಯೋ ಸಹ ಫುಲ್ ವೈರಲ್ ಆಗಿದೆ.
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
