ಚಿತ್ರದುರ್ಗದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹ

Updated on: Sep 15, 2025 | 2:39 PM

ಚಿತ್ರದುರ್ಗದಲ್ಲಿ 18 ದಿನಗಳ ಕಾಲ ನಡೆದ ಹಿಂದೂ ಮಹಾಗಣಪತಿ ಉತ್ಸವದಲ್ಲಿ ಭಕ್ತರಿಂದ ಬರೋಬ್ಬರಿ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ಹಿಂದೂ ಮಹಾಗಣಪತಿ ಸಮಿತಿಯಿಂದ ನಡೆದ ಈ ಕಾಣಿಕೆ ಎಣಿಕೆಯಲ್ಲಿ ಒಟ್ಟು 15 ಲಕ್ಷ ರೂ. ಹಣ ಸಂಗ್ರಹವಾಗಿದ್ದು, ಅದರಲ್ಲಿ 12.50 ಲಕ್ಷ ರೂ. ನೋಟುಗಳು ಹಾಗೂ 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

ಚಿತ್ರದುರ್ಗ, ಸೆಪ್ಟೆಂಬರ್ 15: ಚಿತ್ರದುರ್ಗದಲ್ಲಿ ಮೊನ್ನೆ ವಿಶ್ವ ಹಿಂದೂ ಪರಿಷತ್‌ ಹಾಗೂ ಭಜರಂಗದಳದ ಆಶ್ರಯದಲ್ಲಿ ನಡೆದ ಹಿಂದೂ ಮಹಾಗಣಪತಿ (Hindu Maha Ganapati) ಉತ್ಸವದಲ್ಲಿ ಭಕ್ತರಿಂದ 15 ಲಕ್ಷ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. 18 ದಿನಗಳ ಕಾಲ ನಡೆದ ಈ ಮಹಾಗಣಪತಿ ಉತ್ಸವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ಇದೀಗ ಹಿಂದೂ ಮಹಾಗಣಪತಿ ಸಮಿತಿಯಿಂದ ಈ ಗಣೇಶೋತ್ಸವದಲ್ಲಿ ಸಂಗ್ರಹವಾದ ಕಾಣಿಕೆ ಪೆಟ್ಟಿಗೆಯ ಹಣವನ್ನು ಎಣಿಕೆ  ಮಾಡಲಾಗಿದ್ದು, ಅದರಲ್ಲಿ 12.50 ಲಕ್ಷ ರೂ. ನೋಟುಗಳು ಹಾಗೂ 2.50 ಲಕ್ಷ ರೂ. ಚಿಲ್ಲರೆ ಹಣ ಸಂಗ್ರಹವಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More