ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್

Edited By:

Updated on: Sep 20, 2024 | 10:31 PM

ಕನ್ನಡದಲ್ಲಿ ಔಷಧ ಚೀಟಿ ಬರೆಯುವಂತೆ ಕನ್ನಡ ಪ್ರಾಧಿಕಾರದ ಅಧ್ಯಕ್ಷರ ಇಂಗಿತಕ್ಕೆ ಚಿತ್ರದುರ್ಗದ ವೈದ್ಯ ಸಾಥ್​ ನೀಡಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿನ ತಾಲೂಕು ಆಸ್ಪತ್ರೆಯ ಕೀಲು ಮೂಳೆ ತಜ್ಞ ಡಾ.ಸಂಜಯ್ ಕನ್ನಡದಲ್ಲಿ ಔಷಧ ಚೀಟಿ ಬರೆಯುವ ಮೂಲಕ ಇದೀಗ ವೈರಲ್ ಆಗಿದ್ದಾರೆ.​

ಚಿತ್ರದುರ್ಗ, ಸೆಪ್ಟೆಂಬರ್ 20: ಕನ್ನಡದಲ್ಲಿ ಔಷಧ ಚೀಟಿ (prescription) ಬರೆಯುವ ಮೂಲಕ ಮತ್ತೊಬ್ಬ ವೈದ್ಯ ಗಮನಸೆಳೆದಿದ್ದಾರೆ. ಜಿಲ್ಲೆಯ ಹೊಸದುರ್ಗ ಪಟ್ಟಣದಲ್ಲಿನ ತಾಲೂಕು ಆಸ್ಪತ್ರೆಯ‌ ವೈದ್ಯ ಡಾ.ಸಂಜಯ್ ಕನ್ನಡದಲ್ಲಿ ಔಷಧ ಚೀಟಿ ಬರೆಯುತ್ತಿದ್ದಾರೆ. ಕೀಲು ಮೂಳೆ ತಜ್ಞ ಡಾ.ಸಂಜಯ್​ರಿಂದ ವಿಶೇಷ ಪ್ರಯತ್ನ ಮಾಡಲಾಗುತ್ತಿದ್ದು, ಕನ್ನಡ ಪ್ರಾಧಿಕಾರದ ಅಧ್ಯಕ್ಷರ ಇಂಗಿತ ಹಿನ್ನೆಲೆ ಡಾ.ಸಂಜಯ್​ರಿಂದ ಸಾಕಾರ ನೀಡಲಾಗಿದೆ. ಜೊತೆಗೆ ಕನ್ನಡದಲ್ಲೇ‌ ಔಷಧ ಚೀಟಿಯಿಂದ ಅನೇಕರಿಗೆ ಅನುಕೂಲವಾಗಲಿದೆ. ಸದ್ಯ ಡಾ.ಸಂಜಯ್ ಕನ್ನಡದಲ್ಲೇ ಬರೆದ ಔಷಧ‌ ಚೀಟಿ ವೈರಲ್​ ಆಗಿದ್ದು ಸಾಮಾಜಿಕ‌ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More