ದರ್ಶನ್​ ನ್ಯಾಯಾಂಗ ಬಂಧನ: ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದ ರೇಣುಕಾಸ್ವಾಮಿ ತಂದೆ

Edited By:

Updated on: Jun 22, 2024 | 8:54 PM

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್​ ಜೈಲುಪಾಲಾಗುತ್ತಿದ್ದಂತೆ ರೇಣುಕಾಸ್ವಾಮಿ ತಂದೆ ಮಾತನಾಡಿದ್ದು, ಪೊಲೀಸರ ನ್ಯಾಯಯುತ ಶ್ರಮದಿಂದ ದರ್ಶನ್‌ ಜೈಲುಪಾಲಾಗಿದ್ದಾರೆ. ನನ್ನ ಮಗ ಅನುಭವಿಸಿದ ನೋವಿನ ಶಿಕ್ಷೆ ಆರೋಪಿಗಳಿಗೂ ಆಗಬೇಕು. ಜೈಲು ಶಿಕ್ಷೆ, ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು. ದರ್ಶನ್ ಅಭಿಮಾನಿಗಳು ನಮ್ಮ ಸ್ಥಾನದಲ್ಲಿದ್ದು ಯೋಚಿಸಲಿ. ಕುರುಡು ಅಭಿಮಾನದಿಂದ ಬೆಂಬಲ ಬೇಡ ಎಂದಿದ್ದಾರೆ.

ಚಿತ್ರದುರ್ಗ, ಜೂನ್​ 22: ನಟ ದರ್ಶನ್ (Darshan) ಮತ್ತು ಗ್ಯಾಂಗ್​ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಇಂದು ದರ್ಶನ್​ ಜೈಲು ಸೇರಿದ್ದಾರೆ. ಈ ವಿಚಾರವಾಗಿ ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ (Renukaswamy) ತಂದೆ ಕಾಶಿನಾಥಯ್ಯ ಪ್ರತಿಕ್ರಿಯಿಸಿದ್ದು, ಪೊಲೀಸರ ನ್ಯಾಯಯುತ ಶ್ರಮದಿಂದ ದರ್ಶನ್‌ ಜೈಲುಪಾಲಾಗಿದ್ದಾರೆ. ನನ್ನ ಮಗ ಅನುಭವಿಸಿದ ನೋವಿನ ಶಿಕ್ಷೆ ಆರೋಪಿಗಳಿಗೂ ಆಗಬೇಕು. ಜೈಲು ಶಿಕ್ಷೆ, ಜೀವಾವಧಿ ಶಿಕ್ಷೆಗೂ ಹೊರತಾದ ಶಿಕ್ಷೆಯಾಗಬೇಕು ಎಂದಿದ್ದಾರೆ. ನನ್ನ ಮಗ ರೇಣುಕಾಸ್ವಾಮಿಗೆ ಯಾವ ರೀತಿ ಗಾಯಗಳು ಆಗಿದ್ದವೋ ಅದೇ ರೀತಿ ಗಾಯ ಆಗಬೇಕು, ವಿದ್ಯುತ್ ಶಾಕ್ ಶಿಕ್ಷೆ ಆಗಬೇಕು. ಏನೆಲ್ಲಾ ಬಳಸಿ ಹಲ್ಲೆ ಮಾಡಿದ್ದಾರೋ ಅದೇ ರೀತಿ ಹೊಡೆಯಬೇಕು. ಸಾರ್ವಜನಿಕ ಸ್ಥಳದಲ್ಲಿ ಕಲ್ಲಿನಿಂದ ಹೊಡೆದು ಸಾಯಿಸಬೇಕೆಂದು ಆಕ್ರೋಶಗೊಂಡರು. ನಮ್ಮ ಇಡೀ ಕುಟುಂಬಕ್ಕೆ ಮಾನಸಿಕ ಹಿಂಸೆ ಆಗಿದೆ. ನಟ ದರ್ಶನ್ ಅಭಿಮಾನಿಗಳು ನಮ್ಮ ಸ್ಥಾನದಲ್ಲಿದ್ದು ಯೋಚಿಸಲಿ. ಕುರುಡು ಅಭಿಮಾನದಿಂದ ಬೆಂಬಲ ಬೇಡ. ಕೊಲೆ ಆರೋಪಿಯನ್ನು ದೇವರಂತೆ ಬಿಂಬಿಸುವುದು ಬೇಡ ಎಂದು ಮನವಿ ಮಾಡಿದ್ದಾರೆ. ಪ್ರಕರಣದ ಆರೋಪಿಗಳಿಗೆ ಜಾಮೀನು ಸಿಗಲ್ಲವೆಂಬ ನಂಬಿಕೆಯಿದೆ. ಆರೋಪಿಗೆ ತಕ್ಕ ಶಿಕ್ಷೆ ಕೊಡಿಸುತ್ತಾರೆಂಬ ನಂಬಿಕೆಯಿದೆ. ನ್ಯಾಯಾಂಗ ವ್ಯವಸ್ಥೆ, ಸರ್ಕಾರ, ಪೊಲೀಸರ ಮೇಲೆ ನಂಬಿಕೆಯಿದೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Basavaraj Mudnur

ಆದ್ಯ ವಚನಕಾರ ದೇವರ ದಾಸಿಮಯ್ಯನ 'ಮುದನೂರು' ನಮ್ಮ ಮೂಲ ಊರು. ಸಂತಗುಣದ ತಾತ ಕಿರಿ ವಯಸ್ಸಿನಲ್ಲೇ ಊರು-ಮನೆ ತೊರೆದು ಬರಿಗೈಲಿ ಬಂದು ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಸ್ವಾಭಿಮಾನದ ಬದುಕು ಕಟ್ಟಿಕೊಂಡರು. ಅಪ್ಪ ಶಿಕ್ಷಕರಾಗಿ ಬದುಕು ರೂಪಿಸಿಕೊಂಡರು. ನನಗೂ ಜೀವನ ಪಾಠ ಕಲಿಸಿದ 'ಗುರು' & 'ಗಾಡ್ ಫಾದರ್' ನನ್ನಪ್ಪ. ಓದು ಮತ್ತು ಬರವಣಿಗೆ ನನ್ನ ಹವ್ಯಾಸ. ಕೋಟೆ-ಕೊತ್ತಲು‌, ಕಾಡು-ಮೇಡು‌‌‌ ಸುತ್ತಾಟ, ಚಾರಣವೆಂದರೆ ಪ್ರಾಣಪ್ರೀತಿ. ಹಳೇ ಹಿಂದಿ ಹಾಡು, ಗಝಲ್, ಜನಪದ, ಭಾವಗೀತೆಗಳು ಮತ್ತು ಭಜನೆ ನನಗಿಷ್ಟ. ಕಾಲೇಜು ದಿನಗಳಲ್ಲಿದ್ದ ಕ್ರಿಕೆಟ್ ಹುಚ್ಚು ಕಡಿಮೆ ಆಗಿದೆ. ಕೋಟೆನಾಡು‌ ಚಿತ್ರದುರ್ಗ ಜಿಲ್ಲೆಯ ಟಿವಿ9 ಪ್ರತಿನಿಧಿಯಾಗಿ ಒಂದೂವರೆ ದಶಕದಿಂದ ಕಾರ್ಯ ನಿರ್ವಹಿಸುತ್ತಿದ್ದೇನೆ. 'ಹೆಣ್ಣಾಗಿದ್ದೇ ತಪ್ಪಾ?' ಅಭಿಯಾನದ ಮೂಲಕ ಮೌಢ್ಯದ ವಿರುದ್ಧ ಜಾಗೃತಿ, 'ವಿಷಾಮೃತ' ಅಭಿಯಾನದ ಮೂಲಕ ನೀರಿನ ಕುರಿತು ಸರ್ಕಾರದ ಕಣ್ತೆರೆಸುವ ಕಾರ್ಯ, 'ಕೆರೆ ಉಳಿಸಿ' ಅಭಿಯಾನದ ಮೂಲಕ ಜಲಮೂಲಗಳ ಸಂರಕ್ಷಣೆ, 'ಆಪರೇಷನ್ ಚಿನ್ನ' ಸರಣಿ ವರದಿ ಮೂಲಕ ವಂಚಕರ ಜಾಲ ಬೇಧಿಸುವ ಕರ್ತವ್ಯ, ಬುಡಕಟ್ಟು ಸಮುದಾಯಗಳ ಜೀವನ, ಸಂಸ್ಕೃತಿ, ಆಚರಣೆಗಳ ಅನಾವರಣ, ಬಯಲುಸೀಮೆಯ ರೈತರ ಸಂಕಷ್ಟ, ಭದ್ರಾ ಮೇಲ್ದಂಡೆ ಯೋಜನೆ ಅಗತ್ಯತೆ ಕುರಿತು ವರದಿ, ಭ್ರಷ್ಟರ ಮುಖವಾಡ ಬಯಲು, ಕಾವಿಧಾರಿಗಳ ಕಪಟತನ ತೆರೆದಿಡುವುದು ಸೇರಿ ಅನೇಕ ಜೀವಪರ, ಜನಪರ ವರದಿಗಾರಿಕೆಗೆ ಟಿವಿ9 ವಾಹಿನಿಯಲ್ಲಿ ಅವಕಾಶ ಸಿಕ್ಕಿದ್ದು ಹೆಮ್ಮೆಯ ಸಂಗತಿ.

Read More