ಶಾಂತಿ ಸಭೆಯಲ್ಲಿ ಅಶಾಂತಿ: ಚಿತ್ತಾಪುರ RSS ಪಥಸಂಚಲನ ಚೆಂಡು ಹೈಕೋರ್ಟ್​ ಅಂಗಳಕ್ಕೆ

Updated on: Oct 29, 2025 | 3:31 PM

ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ ಸಂಬಂಧ ಶಾಂತಿ ಸಭೆ ನಡೆಸುವಂತೆ ಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಕಲಬುರಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದ್ದು, ಆರ್​ಎಸ್​ಎಸ್​​ ಹಾಗೂ ಭೀಮ್ ಆರ್ಮಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರದೇ ಸಭೆ ಅಶಾಂತಿಯಲ್ಲೇ ಅಂತ್ಯವಾಗಿದೆ.

ಕಲಬುರಗಿ, (ಅಕ್ಟೋಬರ್ 29): ಸಚಿವ ಪ್ರಿಯಾಂಕ್ ಖರ್ಗೆ ಕ್ಷೇತ್ರವಾದ ಕಲಬುರಗಿಯ ಚಿತ್ತಾಪುರದಲ್ಲಿ ಪಥಸಂಚಲನ ಸಂಘರ್ಷ ನಡೆಯುತ್ತಿದೆ. ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಆರ್​ಎಸ್​​ಎಸ್​ ಕೊರ್ಟ್​​ ಮುಂದೆ ತಿಳಿಸಿದ್ದು, ಈ ಸಂಬಂಧ ಶಾಂತಿ ಸಭೆ ನಡೆಸುವಂತೆ ಕೋರ್ಟ್ ತಿಳಿಸಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಕಲಬುರಗಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಶಾಂತಿ ಸಭೆಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದ್ದು, ಆರ್​ಎಸ್​ಎಸ್​​ ಹಾಗೂ ಭೀಮ್ ಆರ್ಮಿ ನಾಯಕರ ನಡುವೆ ಮಾತಿನ ಚಕಮಕಿ ನಡೆದಿದೆ. ಕೊನೆ ಯಾವುದೇ ಅಂತಿಮ ನಿರ್ಧಾರಕ್ಕೆ ಬರದೇ ಸಭೆ ಅಶಾಂತಿಯಲ್ಲೇ ಅಂತ್ಯವಾಗಿದೆ. ಹೀಗಾಗಿ ಆರ್​ಎಸ್​ಎಸ್​ ಚಿತ್ತಾಪುರ ಪಥಸಂಚಲನ ಚೆಂಡು ಕೋರ್ಟ್ ಅಂಗಳಕ್ಕೆ ಹೋಗಿದ್ದು, ಅಕ್ಟೋಬರ್ 30ರಂದು ಕೋರ್ಟ್ ಯಾವ ತೀರ್ಫು ನೀಡಲಿದೆ ಎನ್ನುವ ಕುತೂಹಲ ಮೂಡಿಸಿದೆ. ಹೀಗಾಗಿ ಎಲ್ಲರ ಚಿತ್ತ ಇದೀಗ ಕಲಬುರಗಿ ಹೈಕೋರ್ಟ್ ವಿಭಾಗೀಯ ಪೀಠದತ್ತ ನೆಟ್ಟಿದೆ.