ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡುವ ಜವಾಬ್ದಾರಿ ನನ್ನ ಮೇಲಿದೆ: ಹೆಚ್ ಡಿ ಕುಮಾರಸ್ವಾಮಿ
ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿವೆಯಾದರೂ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಲ್ಲಿ ಜೆಡಿಸ್ ಪಕ್ಷದ ದೊಡ್ಡಪಾತ್ರವೇನೂ ಇಲ್ಲ, ಅದರೂ ಎಲ್ಲ ಕ್ಷೇತ್ರಗಳಲ್ಲಿನ ಪಕ್ಷದ ಮುಖಂಡರನ್ನು ನಾಳೆ ನಡೆಯುವ ಸಭೆಗೆ ಕರೆಯಲಾಗಿದೆ, ಚುನಾವಣಾ ತಂತ್ರಗಾರಿಕೆಯನ್ನು ಸಭೆಯಲ್ಲಿ ಹೆಣೆಯಲಾಗುವುದು ಎಂದು ಕುಮಾರಸ್ವಾಮಿ ಹೇಳಿದರು.
ರಾಮನಗರ: ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ. ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು ದುಡುಕಿನ ನಿರ್ಧಾರವನ್ನೇನೂ ತೆಗೆದುಕೊಳ್ಳಲ್ಲ, ರಾಜ್ಯ ರಾಜಕೀಯಕ್ಕೆ ಒಳಿತಾಗುವ ತೀರ್ಮಾನ ತೆಗೆದುಕೊಳ್ಳೋದಾಗಿ ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ ಸುಂದರ ಹೆಸರು ನೀಡೋದು ಬಿಟ್ಟರೆ ಶಿವಕುಮಾರ್ ಏನೂ ಮಾಡಿಲ್ಲ: ಕುಮಾರಸ್ವಾಮಿ
Loading...
Unable to load recommendations.
Follow Us