ರಾಮನಗರ: ಹೆಚ್ ಡಿ ಕುಮಾರಸ್ವಾಮಿ ಹೇಳುವಂತೆ ಚನ್ನಪಟ್ಟಣ ಕ್ಷೇತ್ರಕ್ಕೆ ಎನ್ಡಿಎ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಹೊಣೆಗಾರಿಕೆಯನ್ನು ರಾಜ್ಯ ಬಿಜೆಪಿ ನಾಯಕರು ಕೇಂದ್ರ ಸಚಿವನ ಮೇಲೆ ಹೊರೆಸಿದ್ದಾರೆ. ಚನ್ನಪಟ್ಟಣವು ಕುಮಾರಸ್ವಾಮಿ ಪ್ರತಿನಿಧಿಸಿದ ಕ್ಷೇತ್ರವಾಗಿರುವುದರಿಂದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಅವರಿಗೆ ನೀಡಲಾಗಿದೆಯಂತೆ. ಹಾಗಂತ, ತಾನು ದುಡುಕಿನ ನಿರ್ಧಾರವನ್ನೇನೂ ತೆಗೆದುಕೊಳ್ಳಲ್ಲ, ರಾಜ್ಯ ರಾಜಕೀಯಕ್ಕೆ ಒಳಿತಾಗುವ ತೀರ್ಮಾನ ತೆಗೆದುಕೊಳ್ಳೋದಾಗಿ ಕುಮಾರಸ್ವಾಮಿ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಬೆಂಗಳೂರು ಅಭಿವೃದ್ಧಿಗೆ ಸುಂದರ ಹೆಸರು ನೀಡೋದು ಬಿಟ್ಟರೆ ಶಿವಕುಮಾರ್ ಏನೂ ಮಾಡಿಲ್ಲ: ಕುಮಾರಸ್ವಾಮಿ