Underprepared Helipad: ಜೇವರ್ಗಿ ನಗರದ ಹೊರವಲಯದಲ್ಲಿ ಲ್ಯಾಂಡ್ ಆಗುವ ಮೊದಲು ಸಮಸ್ಯೆ ಎದುರಿಸಿದ ಬಿಎಸ್ ಯಡಿಯೂರಪ್ಪ ಹೆಲಿಕಾಪ್ಟರ್

ಅರುಣ್​ ಕುಮಾರ್​ ಬೆಳ್ಳಿ

Updated on: Mar 06, 2023 | 2:35 PM

ಆ ಸ್ಥಿತಿಯಲ್ಲಿ ಚಾಪರ್ ಲ್ಯಾಂಡ್ ಮಾಡಿದರೆ ಅಪಾಯ ತಪ್ಪಿದ್ದಲ್ಲ ಅಂತ ಮನವರಿಕೆ ಮಾಡಿಕೊಂಡ ಪೈಲಟ್ ಲ್ಯಾಂಡ್ ಮಾಡದೆ ಅದೇ ಜಾಗದಲ್ಲಿ ಮತ್ತೆರಡು ಸುತ್ತು ಹಾಕಿ ನಂತರ ಲ್ಯಾಂಡ್ ಮಾಡಿಸುತ್ತಾರೆ.

ಕಲಬುರಗಿ: ಜಿಲ್ಲೆಯ ಪ್ರವಾಸ ತೆರಳಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು (BS Yediyurappa) ಜೇವರ್ಗಿ ತಲುಪಿದಾಗ ಅವರನ್ನು ಹೊತ್ತ ಹೆಲಿಕಾಪ್ಟರ್ ಲ್ಯಾಂಡ್ ಆಗುವ ಮೊದಲು ದೊಡ್ಡ ಸಮಸ್ಯೆ ಎದುರಾಯಿತು. ಜಿಲ್ಲಾಡಳಿತ (district administration) ಮತ್ತು ತಾಲ್ಲೂಕು ಅಧಿಕಾರಿಗಳು ಹೆಲಿಪ್ಯಾಡ್ (helipad) ನಿರ್ಮಿಸುವಾಗ ಸುತ್ತಮುತ್ತಲಿನ ಸ್ಥಳವನ್ನು ಸ್ವಚ್ಛಗೊಳಿಸದ ಕಾರಣ ಹೆಲಿಕಾಪ್ಟರ್ ಚಕ್ರ ಸೃಷ್ಟಿಸುವ ಜೋರುಗಾಳಿಗೆ ಅಲ್ಲಿದ್ದ ಕಸ, ಪ್ಲಾಸ್ಟಿಕ್ ಚೀಲಗಳು, ಡ್ರಮ್ ಹಾರಲಾರಂಭಿಸಿದವು. ಆ ಸ್ಥಿತಿಯಲ್ಲಿ ಚಾಪರ್ ಲ್ಯಾಂಡ್ ಮಾಡಿದರೆ ಅಪಾಯ ತಪ್ಪಿದ್ದಲ್ಲ ಅಂತ ಮನವರಿಕೆ ಮಾಡಿಕೊಂಡ ಪೈಲಟ್ ಲ್ಯಾಂಡ್ ಮಾಡದೆ ಅದೇ ಜಾಗದಲ್ಲಿ ಮತ್ತೆರಡು ಸುತ್ತು ಹಾಕಿ ನಂತರ ಲ್ಯಾಂಡ್ ಮಾಡಿಸುತ್ತಾರೆ. ಜಿಲ್ಲಾಡಳಿಯ ಮತ್ತು ಸ್ಥಳೀಯ ಅಧಿಕಾರಿಗಳು ಸರ್ಕಾರದಿಂದ ತರಾಟೆಗೊಳಗಾಗುವುದು ನಿಶ್ಚಿತ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 06, 2023 02:35 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.