ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ ಚುರುಮುರಿ ವ್ಯಾಪಾರಿ

Edited By:

Updated on: Mar 22, 2024 | 12:51 PM

ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಂಡಿದೆ. ಅಭ್ಯರ್ಥಿಗಳು ಕೊಂಚವೂ ಸಮಯ ಹರಣ ಮಾಡದೇ ಪ್ರಚಾರ ಶುರು ಮಾಡಿದ್ದಾರೆ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿ ಅವರು ಪ್ರಚಾರ ಮಾಡುವ ವೇಳೆ ಚುರುಮುರಿ ವ್ಯಾಪಾರಿಯೊಬ್ಬರು ಚುನಾವಣಾ ಖರ್ಚಿಗೆ ಹಣ ನೀಡಿ ಗೆಲ್ಲಲಿ ಎಂದು ಹಾರೈಸಿದ್ದಾರೆ.

ಚಿಕ್ಕಮಗಳೂರು, ಮಾರ್ಚ್​.22: ಚುರುಮುರಿ ವ್ಯಾಪಾರಿಯೊಬ್ಬರು ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ ಚುನಾವಣಾ ಖರ್ಚಿಗೆ ಹಣ ನೀಡಿದ್ದಾರೆ. ಚಿಕ್ಕಮಗಳೂರು ತಾಲೂಕಿನ ತೇಗೂರು ಸರ್ಕಲ್ ನಲ್ಲಿರುವ ಚುರುಮುರಿ ಅಂಗಡಿಯ ವ್ಯಾಪಾರಿ ಲೋಕೇಶ್ ಬಾಬು ಎಂಬುವವರು ಎಲೆ-ಅಡಿಕೆ-ಬಾಳೆಹಣ್ಣುಗಳ ತಾಂಬೂಲದಲ್ಲಿ 25 ಸಾವಿರ ಹಣ ಇಟ್ಟು ಕೊಟ್ಟಿದ್ದಾರೆ. ಇಂದು ಪ್ರಚಾರಕ್ಕೆಂದು ಹೋದಾಗ ಲೊಕೇಶ್, ತನ್ನ ನೆಚ್ಚಿನ ನಾಯಕನಿಗೆ ಹಣ ನೀಡಿದ್ದಾರೆ.

ಕೋಟಾ ಶ್ರೀನಿವಾಸ ಪೂಜಾರಿ ಅವರು ಇಂದು ನಗರದ ವಿವಿದೆಡೆ ಪ್ರಚಾರ ಮಾಡುತ್ತಿದ್ದಾರೆ. ಈ ವೇಳೆ ಚುರುಮುರಿ ಅಂಗಡಿಗೆ ಭೇಟಿ ನೀಡಿದ್ದು ವ್ಯಾಪಾರಿ ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಸರಳ ಹಾಗೂ ಸಜ್ಜನ ವ್ಯಕ್ತಿತ್ವಕ್ಕೆ ಹೆಸರಾಗಿರುವ ಕೋಟಾ ಶ್ರೀನಿವಾಸ ಪೂಜಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Ashwith Mavinaguni

ಕಾಫಿನಾಡು ಚಿಕ್ಕಮಗಳೂರಿನ ಮಲೆನಾಡಿನ ಮಾವಿನಗುಣಿ ಗ್ರಾಮದಿಂದ ಬೆಂಗಳೂರಿಗೆ ಬಂದು ಪತ್ರಿಕೋದ್ಯಮ ವೃತ್ತಿ ಆರಂಭಿಸಿ, ಹಾಯ್ ಬೆಂಗಳೂರು, ಜನಶ್ರೀ, ಕಸ್ತೂರಿ, ಟೈಮ್ಸ್ ನೌ ನಲ್ಲಿ ಕೆಲಸ ಮಾಡಿದ್ದು. ಸದ್ಯ ಟಿವಿ9 ಕನ್ನಡದಲ್ಲಿ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದು. 8 ವರ್ಷಗಳ ಕಾಲ ರಾಜಕೀಯ, ಕ್ರೈಮ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿದ ಅನುಭವ ಹೊಂದಿದ್ದು. ಉತ್ತಮ ಸಮಾಜಕ್ಕಾಗಿ ಟಿವಿ9 ಜೊತೆ ವೃತ್ತಿ ಜೀವನ ಸಾಗಿದೆ.

Read More