ಹನಿ ಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆ ಮಾಡ್ತಿರೋದ್ರಿಂದ ಹೇಳಿಕೆ ನೀಡುವುದು ಸರಿಯಲ್ಲ: ಕೆಎನ್ ರಾಜಣ್ಣ

Updated on: Apr 12, 2025 | 7:18 PM

ಹನಿ ಟ್ರ್ಯಾಪ್ ಅರೋಪ ಮಾಡಿದ್ದು ತಾನಾದರೂ ಅದರ ಬಗ್ಗೆ ಹೆಚ್ಚು ಉತ್ಸಾಹ ತೋರುವ ಅಗತ್ಯವಿಲ್ಲ, ಸದನದಲ್ಲಿ ಸುನೀಲ್ ಕುಮಾರ್ ಮಾತಾಡುವಾಗ ಸುಮ್ಮನಿದ್ದೆ, ಮರುದಿನ ಬಸನಗೌಡ ಯತ್ನಾಳ್ ನನ್ನ ಹೆಸರನ್ನು ಉಲ್ಲೇಖಿಸದರು, ತಮಕೂರಿನ ಪ್ರಭಾವಿ ಸಚಿವರು ಎಂದರೆ ನಾನು ಮತ್ತು ಪರಮೇಶ್ವರ್, ಹಾಗಾಗಿ ಸದನದಲ್ಲಿ ಹೇಳಿಕೆ ನೀಡಿ ವಿಷಯವನ್ನು ಸ್ಪಷ್ಟಪಡಿಸುವುದು ಅನಿವಾರ್ಯವಾಗಿತ್ತು ಎಂದು ರಾಜಣ್ಣ ಹೇಳಿದರು.

ಬೆಂಗಳೂರು, ಏಪ್ರಿಲ್ 12: ನಗರದಲ್ಲಿಂದು ಗೃಹ ಸಚಿವರನ್ನು (home minister) ಭೇಟಿಯಾದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವ ಕೆಎನ್ ರಾಜಣ್ಣ, ಬಹಳ ದಿನಗಳಿಂದ ಪರಮೇಶ್ವರ್ ಅವರನ್ನು ಭೇಟಿಯಾಗಿರಲಿಲ್ಲ ಹಾಗಾಗಿ ಭೇಟಿಯಾದೆ ಎಂದರು. ಹನಿ ಟ್ರ್ಯಾಪ್ ಪ್ರಕರಣವನ್ನು ಸಿಐಡಿ ತನಿಖೆ ಮಾಡುತ್ತಿದೆ, ಸಂಸ್ಥೆಯೊಂದು ತನಿಖೆ ಅಥವಾ ವಿಚಾರಣೆ ನಡೆಸುವಾಗ ಹೇಳಿಕೆ ನೀಡುವುದು ಸರಿಯಿರುವುದಿಲ್ಲ, ಸಿಐಡಿ ಅಧಿಕಾರಿಗಳ ಮುಂದೆ ವಿಚಾರಣೆಗೆ ಇನ್ನೂ ಹೋಗಿಲ್ಲ, ಇಷ್ಟರಲ್ಲೇ ಹೋಗುತ್ತೇನೆ ಎಂದು ರಾಜಣ್ಣ ಹೇಳಿದರು.

ಇದನ್ನೂ ಓದಿ:   ರಾಜೇಂದ್ರ ರಾಜಣ್ಣ ಹನಿಟ್ರ್ಯಾಪ್, ಕೊಲೆ ಯತ್ನದ ಸಂಚುಕೋರ ಒಬ್ಬನೇ! ಬೆಂಗಳೂರಿನ ಪ್ರಬಲ ವ್ಯಕ್ತಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More