ನಾಗಮಂಗಲದಲ್ಲಿ ದರ್ಶನ್ ಮತ್ತು ಮುಖ್ಯಮಂತ್ರಿ ಚಂದ್ರುರಿಂದ ಸ್ಟಾರ್ ಚಂದ್ರು ಪರ ರೋಡ್ ಶೋ!

ಕೈಗೆ ಬೋಲ್ಟ್ ಗಳನ್ನು ಹಾಕಿಕೊಂಡೇ ಪ್ರಚಾರಕ್ಕೆ ಬಂದಿದ್ದ ದರ್ಶನ್, ಸ್ಟಾರ್ ಚಂದ್ರು ಅವರು ಸ್ಥಳೀಯರಾಗಿರುವ ಕಾರಣಕ್ಕೆ ಆದ್ಯತೆ ನೀಡಲೇಬೇಕು ಮತ್ತು ಅವರನ್ನು ಗೆಲ್ಲಿಸಿದರೆ ಈ ಭಾಗದ ಪ್ರಭಾವಿ ನಾಯಕ ಮತ್ತು ಸಚಿವರೂ ಆಗಿರುವ ಚಲುವರಾಯಸ್ವಾಮಿ ಅವರ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು.

ನಾಗಮಂಗಲದಲ್ಲಿ ದರ್ಶನ್ ಮತ್ತು ಮುಖ್ಯಮಂತ್ರಿ ಚಂದ್ರುರಿಂದ ಸ್ಟಾರ್ ಚಂದ್ರು ಪರ ರೋಡ್ ಶೋ!
|

Updated on: Apr 23, 2024 | 2:25 PM

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರ ಪರ ಚಿತ್ರನಟ ದರ್ಶನ್ (Darshan), ಸಚಿವ ಚಲುವರಾಯಸ್ವಾಮಿ (N Cheluvarayaswamy) ಮತ್ತು ರಾಜ್ಯದ ಅಪ್ ಮುಖಂಡ ಹಾಗೂ ಕನ್ನಡ ಪರ ಹೋರಾಟಗಾರ ಮುಖ್ಯಮಂತ್ರಿ ಚಂದ್ರು (Mukhyamantri Chandru) ಮತ್ತು ಹಲವಾರು ಸ್ಥಳೀಯ ನಾಯಕರು ನಾಗಮಂಗಲ ತಾಲ್ಲೂಕಿನಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ದರ್ಶನ್ ಕ್ಕಿಂತ ಮೊದಲು ಮಾತಾಡಿದ ಚಂದ್ರು ತಮ್ಮ ಎಂದಿನ ಶೈಲಿಯಲ್ಲಿ ಮಾತಾಡಿ ನೆರೆದಿದ್ದ ಜನರನ್ನು ರಂಜಿಸಿದರು. ನೀವೆಲ್ಲ ದರ್ಶನ್ ಮಾತನ್ನು ಕೇಳಬೇಕಾದರೆ ಮೊದಲು ನನ್ನ ಮಾತು ಕೇಳಬೇಕು ಅಂದಾಗ ದಿ ಬಾಸ್ ಮಾತು ಕೇಳಲು ಉರಿಬಿಸಲಲ್ಲಿ ನಿಂತಿದ್ದ ಜನ ಮಾತಾಡಿ ಮಾತಾಡಿ ಅಂತ ಕೂಗಿದರು. ಕೈಗೆ ಬೋಲ್ಟ್ ಗಳನ್ನು ಹಾಕಿಕೊಂಡೇ ಪ್ರಚಾರಕ್ಕೆ ಬಂದಿದ್ದ ದರ್ಶನ್, ಸ್ಟಾರ್ ಚಂದ್ರು ಅವರು ಸ್ಥಳೀಯರಾಗಿರುವ ಕಾರಣಕ್ಕೆ ಆದ್ಯತೆ ನೀಡಲೇಬೇಕು ಮತ್ತು ಅವರನ್ನು ಗೆಲ್ಲಿಸಿದರೆ ಈ ಭಾಗದ ಪ್ರಭಾವಿ ನಾಯಕ ಮತ್ತು ಸಚಿವರೂ ಆಗಿರುವ ಚಲುವರಾಯಸ್ವಾಮಿ ಅವರ ಕೈ ಬಲಪಡಿಸಿದಂತಾಗುತ್ತದೆ ಎಂದು ಹೇಳಿದರು. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಚಲುವರಾಯಸ್ವಾಮಿ ಮಾಡಿದ ಸಹಾಯ ಮತ್ತು ಪ್ರಚಾರವನ್ನು ದರ್ಶನ್ ಜ್ಞಾಪಿಸಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ: ಸ್ಪಷ್ಟನೆ ನೀಡಿದ ಸುಮಲತಾ

Follow us
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ