Karnataka Assembly Polls: ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂಬಿ ಪಾಟೀಲ ಪರ ಭರ್ಜರಿ ಪ್ರಚಾರ ನಡೆಸಿದ ನಟಿ ರಮ್ಯಾ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಮೊದಲಾದ ಯೋಜನೆಗಳ ಜೊತೆ ಪ್ರಣಾಳಿಕೆ ನೀಡಿದ ಭರವಸೆಗಳು ಜಾರಿಗೆ ಬರುತ್ತವೆ ಎಂದು ರಮ್ಯಾ ಹೇಳಿದರು.
ವಿಜಯಪುರ: ಚಿತ್ರನಟಿ ರಮ್ಯಾ (Ramya) ಇಂದು ವಿಜಯಪುರ ಬಬಲೇಶ್ವರ ಕ್ಷೇತ್ರದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ (MB Patil) ಪರ ಪ್ರಚಾರ ನಡೆಸಿದರು. ಮೊದಲಿನ ಹಾಗೆ ಹೆಚ್ಚೆಚ್ಚು ಸಿನಿಮಾಗಳಲ್ಲಿ ತೊಡಗಿಸಿಕೊಳ್ಳದಿದ್ದರೂ ರಮ್ಯಾ ಜನಪ್ರಿಯತೆ (popularity) ಹಾಗೂ ಮೋಹಕತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಬಬಲೇಶ್ವರದಲ್ಲಿ ಅವರು ವಾಹನ ಹತ್ತಿ ನಿಂತಾಗ ನೆರೆದ ಜನರಿಂದ ಕೇಕೆ, ಶಿಳ್ಳೆ. ಅದಕ್ಕೂ ಮೊದಲು ಬಬಲೇಶ್ವರದ ಕಾಂಗ್ರೆಸ್ ಕಾರ್ಯಕರ್ತರು ರಮ್ಯಾ ಮೇಲೆ ಹೂಮಳೆಗರೆದು ಸ್ವಾಗತಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಮೊದಲಾದ ಯೋಜನೆಗಳ ಜೊತೆ ಪ್ರಣಾಳಿಕೆ ನೀಡಿದ ಭರವಸೆಗಳು ಜಾರಿಗೆ ಬರುತ್ತವೆ ಎಂದು ರಮ್ಯಾ ಹೇಳಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್ನಲ್ಲೊಂದು ಭಾವೈಕ್ಯತೆಯ ಜಾತ್ರೆ
