AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂಬಿ ಪಾಟೀಲ ಪರ ಭರ್ಜರಿ ಪ್ರಚಾರ ನಡೆಸಿದ ನಟಿ ರಮ್ಯಾ

Karnataka Assembly Polls: ಬಬಲೇಶ್ವರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎಂಬಿ ಪಾಟೀಲ ಪರ ಭರ್ಜರಿ ಪ್ರಚಾರ ನಡೆಸಿದ ನಟಿ ರಮ್ಯಾ

ಅರುಣ್​ ಕುಮಾರ್​ ಬೆಳ್ಳಿ
|

Updated on: May 06, 2023 | 4:02 PM

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಮೊದಲಾದ ಯೋಜನೆಗಳ ಜೊತೆ ಪ್ರಣಾಳಿಕೆ ನೀಡಿದ ಭರವಸೆಗಳು ಜಾರಿಗೆ ಬರುತ್ತವೆ ಎಂದು ರಮ್ಯಾ ಹೇಳಿದರು.

ವಿಜಯಪುರ: ಚಿತ್ರನಟಿ ರಮ್ಯಾ (Ramya) ಇಂದು ವಿಜಯಪುರ ಬಬಲೇಶ್ವರ ಕ್ಷೇತ್ರದಲ್ಲಿ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂಬಿ ಪಾಟೀಲ (MB Patil) ಪರ ಪ್ರಚಾರ ನಡೆಸಿದರು. ಮೊದಲಿನ ಹಾಗೆ ಹೆಚ್ಚೆಚ್ಚು ಸಿನಿಮಾಗಳಲ್ಲಿ ತೊಡಗಿಸಿಕೊಳ್ಳದಿದ್ದರೂ ರಮ್ಯಾ ಜನಪ್ರಿಯತೆ (popularity) ಹಾಗೂ ಮೋಹಕತೆಯನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ. ಬಬಲೇಶ್ವರದಲ್ಲಿ ಅವರು ವಾಹನ ಹತ್ತಿ ನಿಂತಾಗ ನೆರೆದ ಜನರಿಂದ ಕೇಕೆ, ಶಿಳ್ಳೆ. ಅದಕ್ಕೂ ಮೊದಲು ಬಬಲೇಶ್ವರದ ಕಾಂಗ್ರೆಸ್ ಕಾರ್ಯಕರ್ತರು ರಮ್ಯಾ ಮೇಲೆ ಹೂಮಳೆಗರೆದು ಸ್ವಾಗತಿಸಿದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಗೃಹ ಜ್ಯೋತಿ, ಗೃಹಲಕ್ಷ್ಮಿ, ಯುವನಿಧಿ ಮೊದಲಾದ ಯೋಜನೆಗಳ ಜೊತೆ ಪ್ರಣಾಳಿಕೆ ನೀಡಿದ ಭರವಸೆಗಳು ಜಾರಿಗೆ ಬರುತ್ತವೆ ಎಂದು ರಮ್ಯಾ ಹೇಳಿದರು.
.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ