AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೀಪಾಲಂಕಾರ: ಮದುವಣಗಿತ್ತಿಯಂತೆ ಕಂಗೊಳಿಸ್ತಿದೆ ಅರಮನೆ ನಗರಿ, ಹೆಚ್ಚಾಗುತ್ತಾ ಕೊರೊನಾ?

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ. ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ ಲೈಟ್ಸ್ ನಡುವೆ ಸೆಲ್ಫಿಗೆ ಮುಗಿ ಬಿದ್ದ […]

ದೀಪಾಲಂಕಾರ: ಮದುವಣಗಿತ್ತಿಯಂತೆ ಕಂಗೊಳಿಸ್ತಿದೆ ಅರಮನೆ ನಗರಿ, ಹೆಚ್ಚಾಗುತ್ತಾ ಕೊರೊನಾ?
ಆಯೇಷಾ ಬಾನು
| Edited By: |

Updated on:Oct 19, 2020 | 1:16 PM

Share

ಮೈಸೂರು: ಅರಮನೆ ನಗರಿ ಮದುವಣಗಿತ್ತಿಯಂತೆ ವಿದ್ಯುತ್‌ ದೀಪಾಲಂಕಾರದಿಂದ ಮೀರ ಮೀರ ಮಿಂಚುತ್ತಿದೆ. ಎಲ್ಲೆ ಹೋದ್ರೂ ಕಲರ್‌ ಫುಲ್ ಲೈಟಿಂಗ್ಸ್‌ಗಳು ಎಲ್ಲರನ್ನೂ ಸೆಳೆಯುತ್ತಿದೆ. ಆದ್ರೆ ಇದೇ ಕೊರೊನಾ ಹೆಚ್ಚಾಗಲು ಕಾರಣವಾಗುತ್ತಾ ಅನ್ನೋ ಭಯ ಕಾಡುಲು ಶುರು ಮಾಡಿದೆ.

ಎಲ್ಲೇ ನೋಡಿದ್ರೂ ಕಾಣುವ ಝಗಮಗಿಸೋ ದೀಪಾಲಂಕಾರ. ಬೀದಿ ಬೀದಿಗಲ್ಲಿ ಫಳ ಫಳ ಹೊಳೆಯೋ ಕಲರ್‌ ಫುಲ್‌ ವಿದ್ಯುತ್‌ ದೀಪ.. ಮರದ ಮೇಲೆ, ಕಟ್ಟಡದ ಮೇಲೆ, ರಸ್ತೆಯ ಉದ್ದಕ್ಕೂ ಕಣ್ಣು ಕುಕ್ಕುವ ಲೈಟಿಂಗ್ಸ್‌. ಮಿಂಚುವ ಲೈಟ್ಸ್ ನಡುವೆ ಸೆಲ್ಫಿಗೆ ಮುಗಿ ಬಿದ್ದ ಜನ. ಇದು ಸಾಂಸ್ಕೃತಿಕ ನಗರಿ ಮೈಸೂರಿನ ಸರಳಾ ದಸರಾದ ಝಲಕ್. ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾದ ಪ್ರಮುಖ ಆಕರ್ಷಣೆ ದೀಪಾಲಂಕಾರವಾಗಿದ್ದು, ನಗರದೆಲ್ಲೆಡೆ ದೀಪಾಲಂಕಾರದಿಂದ ಮೈಸೂರು ಕಂಗೊಳಿಸುತ್ತಿದೆ. ಒಂದ್ಕಡೆ ಈ ಕಲರ್ ಫುಲ್ ಲೈಟಿಂಗ್ಸ್‌ ಜನರನ್ನ ಸೆಳೆಯುತ್ತಿದ್ದರೆ, ಕೊರೊನಾ ಭಯ ಕೂಡ ಕಾಡುತ್ತಿದೆ. ಜಗತ್ತಿನಾದ್ಯಂತ ಕೊರೊನಾ ಮಹಾಮಾರಿ ಜನ ಜೀವನವನ್ನು ಅಸ್ತವ್ಯಸ್ತ ಮಾಡಿದ್ದು, ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲೂ ಕೂಡ ಕೊರೊನಾ ಕೇಕೆ ಹಾಕುತ್ತಿದೆ. ಹೀಗಿರುವಾಗ ಮೈಸೂರಿನಲ್ಲಿ ಸರಳ ದಸರಾ ಹೆಸರಿನಲ್ಲಿ ಹಾಕಲಾಗಿರುವ ದೀಪಾಲಂಕಾರ ಕೊರೊ‌ನಾದ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಸರಳ ದಸರಾ ಆಚರಣೆ ಹಿನ್ನೆಲೆಯಲ್ಲಿ ಎಲ್ಲಾ ಕಾರ್ಯಕ್ರಮಗಳಿಗೆ ಬ್ರೇಕ್ ಹಾಕಿದ್ದರೂ ಅರಮನೆ ನಗರಿಯಲ್ಲಿ ಅದ್ದೂರಿಯಾಗಿ ದೀಪಾಲಂಕಾರ ಮಾಡಲಾಗಿದೆ. ಮೈಸೂರಿನ ಪ್ರಮುಖ ರಸ್ತೆಗಳು, ವೃತ್ತಗಳು ಆಕರ್ಷಕ ದೀಪಾಲಂಕಾರದಿಂದ ಕಂಗೊಳಿಸುತ್ತಿವೆ. ಇದನ್ನು ನೋಡಲು ದಸರಾದ ಮೊದಲ ದಿನವೇ ಜನಸಾಗರ ಹರಿದು ಬಂದಿದೆ. ಆದ್ರೆ ಜನರು ಸಾಮಾಜಿಕ ಅಂತರ, ಮಾಸ್ಕ್ ಮರೆತು ಲೈಟ್‌ಗಳ ಮುಂದೆ ಫೋಟೋಗೆ ಮುಗಿ ಬಿದ್ದಿದ್ದಾರೆ. ಇದು ಕೊರೊನಾ ಮತ್ತಷ್ಟು ಹೆಚ್ಚಾಗುವ ಆತಂಕ ಮನೆ ಮಾಡಿದೆ.

ಒಟ್ನಲ್ಲಿ ಕ್ರೂರಿ ಕೊರೊನಾ ಉಪಟಳದಿಂದ ಈ ಸಲ ಸಿಂಪಲ್ ದಸರಾ ಆಚರಣೆ ಮಾಡಲಾಗುತ್ತಿದೆ. ಆದ್ರೆ ಅರಮನೆ ನಗರಿಯಲ್ಲಿ ಹಾಕಿರುವ ಲೈಟಿಂಗ್ಸ್‌ನಿಂದ ಕೊರೊನಾ ಹೆಚ್ಚಾಗುವ ಆತಂಕ ಮನೆ ಮಾಡಿದೆ. ಹೀಗಾಗಿ ಜನ ಆದಷ್ಟು ಎಚ್ಚರಿಕೆಯಿಂದ ಇರಬೇಕು. ಸಾಮಾಜಿಕ ಅಂತರ ಪಾಲಿಸಿ, ಕಡ್ಡಾಯವಾಗಿ ಮಾಸ್ಕ್ ಬಳಸಬೇಕು. ಹಾಗೇ ಅಧಿಕಾರಿಗಳು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕಿದೆ.

Published On - 7:07 am, Sun, 18 October 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ