ಮೈಸೂರು: ಕಂಜನ್​ ಮತ್ತು ಧನಂಜಯ ಆನೆಗಳ ನಡುವೆ ಮತ್ತೆ ಗಲಾಟೆ: ತಪ್ಪಿದ ಭಾರೀ ಅನಾಹುತ

Edited By:

Updated on: Oct 23, 2024 | 4:00 PM

ದಸರಾ ವೇಳೆ ಅರಮನೆ ಆವರಣದಲ್ಲಿ ಕಂಜನ್ ಮೇಲೆ ದಾಳಿ ಮಾಡಿದ್ದ ಧನಂಜಯ ಆನೆ ಇದೀಗ ಮತ್ತೊಮ್ಮೆ ದಾಳಿ ಮಾಡಿರುವಂತಹ ಘಟನೆ ಮೈಸೂರು ಶಿಬಿರದಲ್ಲಿ ನಡೆದಿದೆ. ಮಾವುತರು ಮತ್ತು ಕಾವಾಡಿಗರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ವಿಡಿಯೋ ನೋಡಿ.

ಮೈಸೂರು, ಅಕ್ಟೋಬರ್​ 23: ಮೈಸೂರು ದಸರಾ ಸಮಯದಲ್ಲಿ ಅರಮನೆ ಆವರಣದಲ್ಲೇ ಕಾದಾಟಕ್ಕೆ ಇಳಿದಿದ್ದ ಕಂಜನ್ ಮತ್ತು ಧನಂಜಯ ಆನೆಗಳ (elephants) ನಡುವೆ ಇದೀಗ ಮತ್ತೆ ಗಲಾಟೆ ನಡೆದಿದೆ. ಆನೆ ಶಿಬಿರದಲ್ಲಿ ಘಟನೆ ನಡೆದಿದ್ದು, ಕಂಜನ್ ಮೇಲೆ ಮತ್ತೊಮ್ಮೆ ಧನಂಜಯ ಆನೆ ದಾಳಿ ಮಾಡಿದೆ. ಮಾವುತರು ಮತ್ತು ಕಾವಾಡಿಗರ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ. ಸದ್ಯ ಎರಡು ಆನೆಗಳ ನಡುವಿನ ಗಲಾಟೆ ವಿಡಿಯೋ ಪ್ರವಾಸಿಗರ ಮೊಬೈಲ್​ನಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More