ಗದಗ ನಗರಸಭೆ ಕಚೇರಿಯಲ್ಲೇ ಕೈ ಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಸದಸ್ಯರು

Edited By: Rakesh Nayak Manchi

Updated on: Oct 12, 2023 | 12:27 PM

ಗದಗ ನಗರಸಭೆ ಕಚೇರಿಯಲ್ಲೇ ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ ಪತಿ ಶಶಿಧರ ನಡುವೆ ಜಗಳ ನಡೆದಿದೆ. ಶಶಿಧರ ಎಂಬುವರು ಸಚಿವ ಎಚ್ ಕೆ ಪಾಟೀಲ್​ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಆರೋಪ ಹಿನ್ನೆಲೆ ಇಬ್ಬರ ನಡುವೆ ಜಗಳ ನಡೆದಿದೆ.

ಗದಗ, ಅ.12: ನಗರಸಭೆ (Gadag city municipal council) ಆಯುಕ್ತರ ಕಚೇರಿಯಲ್ಲೇ ಕಾಂಗ್ರೆಸ್ ಸದಸ್ಯ ಜೈನುಲಾದ್ದಿನ್ ನಮಾಜಿ ಹಾಗೂ ಬಿಜೆಪಿ ಸದಸ್ಯೆ ವಿಜಯಲಕ್ಷ್ಮೀ ದಿಂಡೂರ ಪತಿ ಶಶಿಧರ ನಡುವೆ ಜಗಳ ನಡೆದಿದೆ. ಶಶಿಧರ ಎಂಬುವರು ಸಚಿವ ಎಚ್ ಕೆ ಪಾಟೀಲ್​ ಅವರ ಬಗ್ಗೆ ಏಕವಚನದಲ್ಲಿ ಮಾತನಾಡಿದ ಆರೋಪ ಹಿನ್ನೆಲೆ ಇಬ್ಬರ ನಡುವೆ ಜಗಳ ನಡೆದಿದೆ. ಕಿತ್ತಾಟದ ವೇಳೆ ಅಲ್ಲೇ ಇದ್ದ ಅಧಿಕಾರಿಗಳು ಇಬ್ಬರನ್ನು ಸಮಾಧಾನ ಮಾಡಿದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More