Mandya: ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ; ಅಷ್ಟಕ್ಕೂ ಆಗಿದ್ದೇನು?

Edited By:

Updated on: Dec 15, 2025 | 12:51 PM

ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಶಟ್ಟಹಳ್ಳಿಯಲ್ಲಿ ಜಾಗದ‌ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಉಂಟಾದ ತಳ್ಳಾಟ-ನೂಕಾಟದಲ್ಲಿ ಅಂಬೇಡ್ಕರ್​​ ಫ್ಲೆಕ್ಸ್​​ಗೆ ಹಾನಿಯಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ. 0 ಗುಂಟೆ ಜಾಗದಲ್ಲಿ 5 ಗುಂಟೆ ಜಾಗವನ್ನು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಬಿಟ್ಟುಕೊಡುವಂತೆ ಒಂದು ಸಮುದಾಯ ಒತ್ತಾಯ ಮಾಡಿದೆ. ಆದರೆ ಜಾಗ ಬಿಟ್ಟುಕೊಡಲು ಮತ್ತೊಂದು ಸಮುದಾಯ ವಿರೋಧ ವ್ಯಕ್ತಪಡಿಸಿದೆ.

ಮಂಡ್ಯ, ಡಿಸೆಂಬರ್​​ 15: ಜಾಗದ‌ ವಿಚಾರವಾಗಿ ಎರಡು ಸಮುದಾಯಗಳ ನಡುವೆ ಗಲಾಟೆ ನಡೆದು ಉಂಟಾದ ತಳ್ಳಾಟ ನೂಕಾಟದಲ್ಲಿ ಅಂಬೇಡ್ಕರ್​​ ಫ್ಲೆಕ್ಸ್​​ಗೆ ಹಾನಿಯಾಗಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಶಟ್ಟಹಳ್ಳಿಯಲ್ಲಿ ನಡೆದಿದೆ. ಬೊಮ್ಮಲಿಂಗೇಶ್ವರ ಟ್ರಸ್ಟ್ ಹೆಸರಿನಲ್ಲಿರುವ ಜಾಗದ ವಿಚಾರದಲ್ಲಿ ಗಲಾಟೆ ನಡೆದಿದ್ದು, ಸಸಿ ನೆಡುವುದಕ್ಕೆ ಮತ್ತೊಂದು ಸಮುದಾಯ ವಿರೋಧ ವ್ಯಕ್ತಪಡಿಸಿದೆ. ಜೊತೆಗೆ ಆ ಜಾಗದಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಇಡಲು ಯತ್ನಿಸಿದಾಗ ವಾಗ್ವಾದ ನಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿ ತಳ್ಳಾಟ ನೂಕಾಟ ನಡೆದಿದೆ. ಜಾಗದ ವಿಚಾರವಾಗಿ ಒಂದು ವರ್ಷದಿಂದ ವಿವಾದ ಇದ್ದು, 30 ಗುಂಟೆ ಜಾಗದಲ್ಲಿ 5 ಗುಂಟೆ ಜಾಗವನ್ನು ಅಂಬೇಡ್ಕರ್ ಪ್ರತಿಮೆ ನಿರ್ಮಾಣಕ್ಕೆ ಬಿಟ್ಟುಕೊಡುವಂತೆ ಒಂದು ಸಮುದಾಯ ಒತ್ತಾಯ ಮಾಡಿದೆ. ಆದರೆ ಜಾಗ ಬಿಟ್ಟುಕೊಡಲು ಮತ್ತೊಂದು ಸಮುದಾಯ ವಿರೋಧ ವ್ಯಕ್ತಪಡಿಸಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Dec 15, 2025 12:49 PM
Follow Us
Dileep CP

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದವನು. ಕಳೆದ 13 ವರ್ಷದಿಂದ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ.‌ಪತ್ರಿಕೋಧ್ಯಮ ಪದವಿದರನಾಗಿದ್ದೇನೆ.ಮೊದಲಿಗೆ ಮೈಸೂರಿನ ಸ್ಥಳಿಯ ವಾಹಿನ ಹಾಗೂ ಪತ್ರಿಕೆಯಲ್ಲಿ ಕೆಲಸ ನಿರ್ವಹಿಸಿದ್ದೆ.ನಂತರ ಪಬ್ಲಿಕ್ ಟಿವಿಯಲ್ಲಿ ಚಾಮರಾಜನಗರ ಜಿಲ್ಲಾವರದಿಗಾರನಾಗುವ ಅವಕಾಶ ಸಿಕ್ಕಿತು. ಅದಾದ ಬಳಿಕ ಐದು ವರ್ಷಗಳ ಕಾಲ ಚಾಮರಾಜನಗರದಲ್ಲಿ ಕೆಲಸ ನಿರ್ವಹಿಸಿದ್ದೇನೆ. ಬಳಿಕ 2018 ರಲ್ಲಿ ಟಿರ್ವಿ ಮೈಸೂರು ವರದಿಗಾರನಾಗುವ ಅವಕಾಶ ಸಿಕ್ಕಿತು. ಅಂದಿನಿಂದ ಮೈಸೂರು ಜಿಲ್ಲಾ ವರದಿಗಾರರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಅದನ್ನು ಹೊರತು ಪಡಿಸಿದರೆ ಒಂದಷ್ಟು ಕೃಷಿ, ಸಾಹಿತ್ಯ ಆಸಕ್ತಿ ಇದೆ.

Read More