ನಾಯಕತ್ವ ಬದಲಾದರೂ ಕೋಲಾರ ಕಾಂಗ್ರೆಸ್​ನಲ್ಲಿ ಮುಗಿಯದ ಬಣ ಬಡಿದಾಟ

Edited By:

Updated on: Jun 14, 2026 | 10:23 PM

ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಮುಖಂಡರ ಸಭೆಯಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಕೆ.ಹೆಚ್.ಮುನಿಯಪ್ಪ ಬೆಂಬಲಿಗರ ನಡುವೆ ತೀವ್ರ ಮಾತಿನ ಚಕಮಕಿ ನಡೆದಿದೆ. ಈ ಘಟನೆಯಲ್ಲಿ ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್ ನಡುವೆ ಅವಾಚ್ಯ ಪದಗಳ ಬಳಕೆ ಸಹಿತ ಗಲಾಟೆ ಸಂಭವಿಸಿದೆ.

ಕೋಲಾರ, ಜೂನ್​​ 14: ಕೋಲಾರ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಬಿ.ಕೆ.ಹರಿಪ್ರಸಾದ್​​ ಅಧಿಕಾರ ಸ್ವೀಕಾರ ಕಾರ್ಯಕ್ರಮದ ಪೂರ್ವಭಾವಿ ಸಭೆ ತೀವ್ರ ಮಾತಿನ ಚಕಮಕಿಗೆ ಕಾರಣವಾಗಿದೆ. ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಮತ್ತು ಸಚಿವ ಕೆ.ಹೆಚ್.ಮುನಿಯಪ್ಪ ಬಣಗಳ ನಡುವೆ ಗಲಾಟೆ ನಡೆದಿದೆ. ಶಾಸಕರು ಹಾಗೂ ಇತರ ಹಿರಿಯ ಮುಖಂಡರ ಸಮ್ಮುಖದಲ್ಲೇ ಬಣ ರಾಜಕೀಯದ ಜಗಳ ಬಹಿರಂಗಗೊಂಡಿದೆ. ಸಭೆ ನಡೆಯುತ್ತಿದ್ದ ಸಂದರ್ಭದಲ್ಲಿ, ಕೆ.ಹೆಚ್.ಮುನಿಯಪ್ಪ ಬಣದ ಮಂಜುನಾಥ್ ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸೈಯದ್ ಅಫ್ಸರ್ ನಡುವೆ ವಾಗ್ವಾದ ತಾರಕಕ್ಕೇರಿದೆ. ಈ ವೇಳೆ ಮುಖಂಡರು ಅವಾಚ್ಯ ಪದಗಳಿಂದ ಬೈದಾಡಿಕೊಂಡರು. ಸಭೆ ನಂತರವೂ ಕಚೇರಿ ಹೊರಗೂ ಮಾತಿನ ಚಕಮಕಿ ಉಂಟಾಗಿದೆ. ಶಾಸಕ ಕೆ.ವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಮತ್ತು MLC ಅನಿಲ್ ಕುಮಾರ್ ಸಭೆಯಲ್ಲಿ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jun 14, 2026 10:22 PM
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More