ಕೋಲಾರ, ಸೆ.28: ಕೋಲಾರ ನಗರದ ಹೊರವಲಯದ ನಂದಿನಿ ಪ್ಯಾಲೇಸ್ನಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ ನಡೆದಿದ್ದು, ಶಾಸಕರ ಮುಂದೆಯೇ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡಿದ್ದಾರೆ. ಕೆ.ಹೆಚ್. ಮುನಿಯಪ್ಪ ಹಾಗೂ ಕೆಲವು ಶಾಸಕರ ಬೆಂಬಲಿಗರ ನಡುವೆ ಮಾತಿನ ಚಕಮಕಿ ನಡೆದಿದೆ. ಹೌದು, ಕಾಂಗ್ರೆಸ್ ಪಕ್ಷದ ವಿರುದ್ದ ಕೆಲಸ ಮಾಡಿದವರನ್ನು ವೇದಿಕೆ ಮೇಲೆ ಕೂರಿಸಿದ್ದೀರಿ ಎಂದು ಗಲಾಟೆ ಶುರುವಾಗಿದ್ದು, ಇದೇ ವೇಳೆ ಕೆಲ ಕಾರ್ಯಕರ್ತರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಲಕ್ಷ್ಮೀನಾರಾಯಣ್ ಮೇಲೆ ಕೈ ಮಾಡಿ ಸಭೆಯಿಂದ ಹೊರ ತಳ್ಳಿದ್ದಾರೆ. ಇನ್ನು ಈ ಸಭೆಯಲ್ಲಿ ಶಾಸಕರಾದ ಕೊತ್ತೂರು ಮಂಜುನಾಥ್, ನಂಜೇಗೌಡ, ಕೋಲಾರ ಕಾಂಗ್ರೆಸ್ ಉಸ್ತುವಾರಿ ನಾರಾಯಣಸ್ವಾಮಿ, ಸಿಎಂ ರಾಜಕೀಯ ಕಾರ್ಯದರ್ಶಿ ನಜೀರ್ ಅಹಮದ್ ಭಾಗಿಯಾಗಿದ್ದರು.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ