1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ
ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ ಪೋಷಕರು ನಿರಾಳರಾಗಿದ್ದಾರೆ.
ಬೆಂಗಳೂರು, (ಮಾರ್ಚ್ 26): ಶಾಲೆ ದಾಖಲಿಗೆ ಮಕ್ಕಳಿಗೆ ನಿಗದಿಪಡಿಸಿದ್ದ ವಯೋಮಿತಿಯನ್ನು ಸರ್ಕಾರ ಸಡಿಲಿಕೆ ಮಾಡಿದೆ. 1 ನೇ ತರಗತಿಗೆ 6 ವರ್ಷ ತುಂಬಿರಬೇಕು ಎಂಬ ನಿಯಮದಲ್ಲಿ 60 ದಿನ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಇಂದು (ಮಾರ್ಚ್ 26)ವಿಧಾನಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ಈ ಮೂಲಕ ಯುಕೆಜಿ ಮುಗಿಸಿದರೂ 6 ವರ್ಷ ಪೂರ್ಣಗೊಂಡಿಲ್ಲವೆಂದು ಚಿಂತೆಯಲ್ಲಿದ್ದ ಪೋಷಕರು ನಿರಾಳರಾಗಿದ್ದಾರೆ.
ಗುರುವಾರ ವಿಧಾನಸಭೆ ಅಧಿವೇಶನದಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧುಬಂಗಾರಪ್ಪ, ಪ್ರಸಕ್ತ ವರ್ಷಕ್ಕೆ ಅನ್ವಯವಾಗುವಂತೆ ಮಕ್ಕಳ ಶಾಲಾ ಪ್ರವೇಶಕ್ಕೆ ನಿಗದಿಪಡಿಸಿದ್ದ 6 ವರ್ಷಗಳ ವಯೋಮಿತಿಗೆ 60 ದಿನಗಳ ಕಾಲ ವಿನಾಯಿತಿ ನೀಡಲಾಗಿದೆ. ಪ್ರತಿ ವರ್ಷ ಪೋಷಕರಿಗೆ ಈ ಬಗ್ಗೆ ಗೊಂದಲವಾಗುತ್ತಿದೆ. ಎಲ್ಕೆಜಿ ಮತ್ತು ಯುಕೆಜಿ ಸೇರ್ಪಡೆಗೆ ಸೂಕ್ತ ವಯೋಮಿತಿ ಕಾನೂನು ಇಲ್ಲದಿರುವುದು ಇದಕ್ಕೆ ಕಾರಣವಾಗಿದೆ. ಮುಂದಿನ ದಿನಗಳಲ್ಲಿ ಎಲ್ಕೆಜಿ, ಯುಕೆಜಿ ಸೇರ್ಪಡೆಗೆ ಸಂಬಂಧಿಸಿದಂತೆ ಕಾನೂನು ಜಾರಿ ಮಾಡುತ್ತೇವೆ. ಈ ಬಗ್ಗೆ ಅಗತ್ಯ ಸಭೆ ನಡೆಸಲಾಗುತ್ತದೆ ಹೇಳಿದರು.

