ಸರ್ಕಾರೀ ಮತ್ತು ಪಕ್ಷದ ಕಾರ್ಯಗಳ ನಿಮಿತ್ತ ಸಿಎಂ ಮತ್ತು ಡಿಸಿಎಂ ದೆಹಲಿಗೆ ಹೋಗಲಿದ್ದಾರೆ: ಡಿಕೆ ಸುರೇಶ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 22, 2025 | 12:59 PM

ರಾಜ್ಯ ಕಾಂಗ್ರೆಸ್ ಘಟಕದಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಹೊಸ ವಿಚಾರನೇನಲ್ಲ, ಮೊದ್ಲಿಂದ್ಲೂ ಎರಡು ಬಣಗಳಿವೆ ಮತ್ತು ಅವು ಯಾವೆಂದು ಕನ್ನಡಿಗರಿಗೆ ಗೊತ್ತು. ಶನಿವಾರದಂದು ಸಿದ್ದರಾಮಯ್ಯನವರು ಮೈಸೂರಲ್ಲಿ ಸಾಧನಾ ಸಮಾವೇಶ ನಡೆಸುವ ಅವಶ್ಯಕತೆಯಿತ್ತೇ ಅಂತ ಅವರ ಪಕ್ಷದವರೇ ಕೇಳುತ್ತಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಶಿವಕುಮಾರ್ ಹೆಸನ್ನು ಸಲ್ಯೂಟೇಷನ್​ನಲ್ಲಿ ಹೇಳದಿರುವುದು ಕೆಟ್ಟ ಸಂದೇಶ ರವಾನಿಸಿದೆ.

ಬೆಂಗಳೂರು, ಜುಲೈ 22: ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಮಾಜಿ ಸಂಸದ ಡಿಕೆ ಸುರೇಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ಅವರು ಸರ್ಕಾರೀ ಮತ್ತು ಪಕ್ಷದ ಕೆಲಸಗಳ ನಿಮಿತ್ತ ದೆಹಲಿಗೆ ಹೋಗಲಿದ್ದಾರೆ, ಅದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದು ಹೇಳಿದರು. ಸಂಸತ್ ಅಧಿವೇಶನ ನಡಯುತ್ತಿದೆ, ಸಿಎಂಗೆ ಮತ್ತು ಡಿಸಿಎಂಗೆ ಸಂಸದರೊಂದಿಗೆ ಮತ್ತು ಕೇಂದ್ರದ ಸಚಿವರೊಂದಿಗೆ ಚರ್ಚೆ ಮಾಡೋದಿರುತ್ತದೆ, ಕೇಂದ್ರದಿಂದ ರಾಜ್ಯಕ್ಕೆ ಸಿಗಬೇಕಿರುವ ಅನುದಾನಗಳ ಬಗ್ಗೆ ಮಾತಾಡುವುದಿರುತ್ತದೆ, ಪಕ್ಷ ಸಂಘಟನೆ ವಿಷಯದಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸುವ ಕೆಲಸವಿರುತ್ತದೆ ಎಂದು ಹೇಳಿದ ಸುರೇಶ್, ಶಿವಕುಮಾರ್ ಅವರು ದೆಹಲಿಗೆ ಹೋಗುತ್ತಿರುವುದು ಹೊಸದೇನಲ್ಲ ಎಂದರು.

ಇದನ್ನೂ ಓದಿ: ಐಶ್ವರ್ಯ ಗೌಡ ವಂಚನೆ ಪ್ರಕರಣ ಮತ್ತು ಡಿಕೆ ಸುರೇಶ್ ನಡುವೆ ಯಾವುದೇ ಸಂಬಂಧವಿಲ್ಲ: ಡಿಕೆ ಶಿವಕುಮಾರ್

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.