ಹನಿ ಟ್ರ್ಯಾಪ್ ಕೇಸ್: ದೂರು ಯಾಕೆ ನೀಡಿಲ್ಲವೆಂದು ಮುಖ್ಯಮಂತ್ರಿ ಕೇಳಿದ್ದಾರೆ, ಇವತ್ತು ನೀಡುತ್ತಿದ್ದೇನೆ: ಕೆಎನ್ ರಾಜಣ್ಣ

Updated on: Mar 25, 2025 | 2:16 PM

ಲೋಕೋಪಯೋಗಿ ಖಾತೆ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿಗೆ ತೆರಳಿ ಪಕ್ಷದ ಹಿರಿಯ ನಾಯಕರ ಜೊತೆ ಮಾತುತೆ ನಡೆಸಿದ್ದರ ಬಗ್ಗೆ ತನ್ನ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ರಾಜಣ್ಣ, ಅವರಿವರು ದೆಹಲಿಗೆ ಹೋಗಿದ್ದು ಅಲ್ಲಿಂದ ವಾಪಸ್ಸು ಬಂದಿದ್ದರ ಬಗ್ಗೆ ಪ್ರಶ್ನೆಗಳನ್ನು ಕೇಳಬೇಡಿ, ತಮ್ಮ ತಮ್ಮ ಕೆಲಸಗಳ ನಿಮಿತ್ತ ರಾಜ್ಯದ ನಾಯಕರು ದೆಹಲಿಗೆ ಹೋಗುತ್ತಾರೆ ಎಂದು ಹೇಳಿದರು.

ತುಮಕೂರು, ಮಾರ್ಚ್ 25: ತನ್ನ ವಿರುದ್ಧ ಹನಿ ಟ್ರ್ಯಾಪ್ ನಡೆಸುವ ಸಂಚು ನಡೆದಿದೆ ಅಂತ ಸದನದಲ್ಲಿ ಹೇಳಿರುವ ಸಹಕಾರ ಸಚಿವ ಕೆಎನ್ ರಾಜಣ್ಣ, ಇದುವರೆಗೆ ದೂರು ಸಲ್ಲಿಸಿಲ್ಲ. ಮುಖ್ಯಮಂತ್ರಿಯವರನ್ನು ಕೇಳಿ ಮುಂದುವರಿಯುವುದಾಗಿ ಅವರು ಹೇಳುತ್ತಿದ್ದರು. ಇವತ್ತು ತುಮಕೂರುನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ರಾಜಣ್ಣ ತಾನು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದು ಮತ್ತು ಅವರು ಇನ್ನೂ ಯಾಕೆ ದೂರು ಸಲ್ಲಿಸಿಲ್ಲ ಎಂದು ಕೇಳಿದ ಬಗ್ಗೆ ವಿವರಣೆ ನೀಡಿದರು. ಇವತ್ತು ಅವರು ತಮ್ಮ ವಿರುದ್ಧ ಹನಿ ಟ್ರ್ಯಾಪ್ ನಡೆಸುವ ಪ್ರಯತ್ನಕ್ಕೆ ಸಂಬಂಧಿಸಿದಂತೆ ದೂರು ಸಲ್ಲಿಸುವರಂತೆ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಹನಿ ಟ್ರ್ಯಾಪ್ ಹಿಂದೆ ಯಾರಿದ್ದಾರೆ ಗೊತ್ತಿದೆ, ಮುಖ್ಯಮಂತ್ರಿಯವರಿಗೆ ಹೇಳುತ್ತೇನೆ: ರಾಜೇಂದ್ರ, ರಾಜಣ್ಣ ಮಗ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More