Basavaraj Bommai: ಪ್ರದರ್ಶನಕ್ಕೆ ಇಡಲಾಗಿದ್ದ ಸಿದ್ದರಾಮಯ್ಯ ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟ ಸಿಎಂ ಬೊಮ್ಮಾಯಿ‌

| Updated By: ಆಯೇಷಾ ಬಾನು

Updated on: Oct 27, 2022 | 3:22 PM

ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು.

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರು ಚಿತ್ರಕಲಾ ಪರಿಷತ್​ನಲ್ಲಿ ಪತ್ರಿಕಾ ಛಾಯಾಚಿತ್ರಗಳ ಪ್ರದರ್ಶನ ಉದ್ಘಾಟಿಸಿದರು. ಈ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ಫೋಟೋ ಕ್ಲಿಕ್ಕಿಸಿದ್ದಾರೆ. ಛಾಯಾಚಿತ್ರಗಳ ಪ್ರದರ್ಶನದಲ್ಲಿ ಇಡಲಾಗಿದ್ದ ಸಿದ್ದರಾಮಯ್ಯ ಅವರ ಕೋಪದ ಫೋಟೋವನ್ನ ಕಂಡ ಸಿಎಂ ಬೊಮ್ಮಾಯಿ ಅವರು ಕೈಯಲ್ಲಿ ಕ್ಯಾಮರಾ ಹಿಡಿದು ಫೋಟೋ ಕ್ಲಿಕ್ಕಿಸಿ ಖುಷಿ ಪಟ್ಟರು. ಛಾಯಾಗ್ರಾಹಕರ ಸಂಘದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

Published On - 3:22 pm, Thu, 27 October 22

Follow us on