KIT launched: ಒಂಭತ್ತು ವಿಶ್ವವಿದ್ಯಾಲಯಗಳನ್ನು ಉದ್ಘಾಟಿಸಿ ಮಾತಾಡಿದ ಮುಖ್ಯಮಂತ್ರಿ ಬೊಮ್ಮಾಯಿ ವಿದ್ಯಾರ್ಥಿಗಳನ್ನು ರಂಜಿಸಿದರು

ಅರುಣ್​ ಕುಮಾರ್​ ಬೆಳ್ಳಿ

Updated on: Mar 28, 2023 | 12:32 PM

ಐಐಟಿ ಮಾದರಿಯಲ್ಲಿ ಕರ್ನಾಟಕ ಇನ್ ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿಯನ್ನುಸ್ಥಾಪಿಸಿದ್ದೇವೆ, ಕರ್ನಾಟಕ ಶಿಕ್ಷಣ ಮಾಡೆಲ್ ಎಲ್ಲ ರಾಜ್ಯಗಳಿಗೆ ಮಾದರಿಯಾಗಲಿದೆ ಹೇಳಿದಾಗ ಸಿಎಂ ಹೇಳಿದಾಗ ವಿದ್ಯಾರ್ಥಿಗಳು ಕಿವಿಗಡಚಿಕ್ಕುವಂತೆ ಶಿಳ್ಳೆ, ಕೇಕೆ ಹಾಕುತ್ತಾ ಚಪ್ಪಾಳೆ ತಟ್ಟಿದರು.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನಿಸ್ಸಂದೇಹವಾಗಿ ಯುವಕರು ಅದರಲ್ಲೂ ವಿಶೇಷವಾಗಿ ವಿದ್ಯಾರ್ಥಿಗಳ ನಡುವೆ ಹೆಚ್ಚು ಜನಪ್ರಿಯರಾಗಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಒಂಭತ್ತು ವಿಶ್ವವಿದ್ಯಾಲಯಗಳನ್ನು (universities) ಉದ್ಘಾಟಿಸಿ ಮಾತಾಡಿದ ಮುಖ್ಯಮಂತ್ರಿಯವರು, ತಮ್ಮ ಮಾತುಗಳಿಂದ ವಿದ್ಯಾರ್ಥಿಗಳನ್ನು ರಂಜಿಸಿದರು. ಇಂಡಿಯನ್ ಇನ್ ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿ ಮಾದರಿಯಲ್ಲಿ ಕರ್ನಾಟಕ ಇನ್ ಸ್ಟಿಟ್ಯೂಷನ್ ಆಫ್ ಟೆಕ್ನಾಲಜಿಯನ್ನು (Karnataka Institute of Technology) ನಾವು ಸ್ಥಾಪಿಸಿದ್ದೇವೆ, ಕರ್ನಾಟಕ ಶಿಕ್ಷಣ ಮಾಡೆಲ್ ಎಲ್ಲ ರಾಜ್ಯಗಳಿಗೆ ಮಾದರಿಯಾಗಲಿದೆ, ಯೂಥ್ ಅಂದರೆ ಶಕ್ತಿ ಅನ್ನೋದನ್ನು ನಾವು ಮನಗಂಡಿದ್ದೇವೆ ಅಂತ ಅವರು ಹೇಳಿದಾಗ ಅಲ್ಲಿ ನೆರೆದಿದ್ದ ವಿದ್ಯಾರ್ಥಿಗಳು ಕಿವಿಗಡಚಿಕ್ಕುವಂತೆ ಶಿಳ್ಳೆ, ಕೇಕೆ ಹಾಕುತ್ತಾ ಚಪ್ಪಾಳೆ ತಟ್ಟಿದರು. ನಿಮ್ಮಲ್ಲಿರುವ ಉತ್ಸಾಹ, ಹುಮ್ಮಸ್ಸು ನೋಡುತ್ತಿದ್ದರೆ ನನಗೂ ನಿಮ್ಮ ನಡುವೆ ಬಂದು ಕೂರಬೇಕೆನಿಸುತ್ತಿದೆ ಅಂತ ಬೊಮ್ಮಾಯಿಯವರು ಹೇಳಿದಾಗ ಮತ್ತೇ ಶಿಳ್ಳೆ, ಕೇಕೆ!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.