AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Polls: ಮುಖ್ಯಮಂತ್ರಿ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದ್ದಾಗ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಸಿಕ್ಕರು!

Karnataka Assembly Polls: ಮುಖ್ಯಮಂತ್ರಿ ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕೆ ತೆರಳಿದ್ದಾಗ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ಸಿಕ್ಕರು!

ಅರುಣ್​ ಕುಮಾರ್​ ಬೆಳ್ಳಿ
|

Updated on: Apr 13, 2023 | 12:27 PM

Share

ಸುದೀಪ್ ತಾನು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಾಮ ಅಂತ ಕರೆಯುವುದನ್ನು ಹೇಳಿಕೊಂಡರಲ್ಲದೆ ಅವರು ಹೇಳುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದರು.

ಉಡುಪಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರಿಗೆ ಸಿನಿಮಾದವರ ನಂಟು ಜೋರಾಗಿದೆ ಮಾರಾಯ್ರೇ. ಕಳೆದ ವಾರವಷ್ಟೇ ಜನಪ್ರಿಯ ನಾಯಕ ನಟ ಕಿಚ್ಚ ಸುದೀಪ್ (Kiccha Sudeep) ಒಂದಿಗೆ ಅವರು ಸುದ್ದಿಗೋಷ್ಟಿಯೊಂದರಲ್ಲಿ ಪಾಲ್ಗೊಂಡರು. ಆ ಸುದ್ದಿಗೋಷ್ಟಿಯಲ್ಲಿ ಸುದೀಪ್ ತಾನು ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಮಾಮ ಅಂತ ಕರೆಯುವುದನ್ನು ಹೇಳಿಕೊಂಡರಲ್ಲದೆ ಅವರು ಹೇಳುವ ಅಭ್ಯರ್ಥಿಗಳ ಪರ ಪ್ರಚಾರ ನಡೆಸುವುದಾಗಿ ಹೇಳಿದ್ದರು. ಇಂದು ಬೊಮ್ಮಾಯಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ (Kollur Mookambika temple) ಭೇಟಿ ನೀಡಿದಾಗ ಕಾಂತಾರ ಚಿತ್ರದ ಮೂಲಕ ಅಂತರರಾಷ್ಟ್ರೀಯ ಮನ್ನಣೆ ಗಳಿಸಿರುವ ರಿಷಬ್ ಶೆಟ್ಟಿ (Rishab Shetty) ಸಿಕ್ಕರು. ರಿಷಬ್ ಮುಖ್ಯಮಂತ್ರಿಗಳನ್ನು ಕಂಡಕೂಡಲೇ ಪಾದಮುಟ್ಟಿ ನಮಸ್ಕರಿಸಿದ್ದು ವಿಶೇಷವೆನಿಸಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ