Karnataka Budget 2023: ಎಐಸಿಸಿ ಕಾರ್ಯದರ್ಶಿ ರಂದೀಪ್ ಸುರ್ಜೆವಾಲಾ ಮೂರು ಪದಗಳಲ್ಲಿ ಬಜೆಟ್ ವರ್ಣಿಸಿದರು, ಕಿವಿ-ಮೇಲೆ-ಹೂ!

ಅರುಣ್​ ಕುಮಾರ್​ ಬೆಳ್ಳಿ

Updated on: Feb 17, 2023 | 4:02 PM

2022-23 ಸಾಲಿನ ಬಜೆಟ್ ನಲ್ಲಿ 349 ಹೊಸ ಯೋಜನೆಗಳ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಅವುಗಳಲ್ಲಿ ಯಾವುದನ್ನೂ ನೆರವೇರಿಸಲಿಲ್ಲ ಎಂದು ಸುರ್ಜೆವಾಲಾ ದೂರಿದರು.

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ವಿಧಾನಸಭೆಯಲ್ಲಿ ಮಂಡಿಸಿದ 2023-24 ನೇ ಸಾಲಿನ ಬಜೆಟ್ ಗೆ ಹುಬ್ಬಳ್ಳಿಯಲ್ಲಿಂದು ಪ್ರತಿಕ್ರಿಯಿಸಿದ ಎಐಸಿಸಿ ಕರ್ನಾಟಕ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ (Randeep Singh Surjewala) ಅದನ್ನು ಮೂರು ಕನ್ನಡ ಪದಗಳಲ್ಲಿ ಬಣ್ಣಿಸಿದರು. ಕಿವಿ-ಮೇಲೆ-ಹೂ! ಈ ಬಜೆಟ್ ಒಂದು ಸುಳ್ಳು ಭರವಸೆಗಳ ಕಂತೆ, ಬಸವರಾಜ ಬೊಮ್ಮಾಯಿ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಂದ (PM Narendra Modi) ಸುಳ್ಳು ಹೇಳುವುದನ್ನು ಚೆನ್ನಾಗೇ ಕಲಿತಿದ್ದಾರೆ ಎಂದು ಸುರ್ಜೆವಾಲಾ ಹೇಳಿದರು. 2022-23 ಸಾಲಿನ ಬಜೆಟ್ ನಲ್ಲಿ 349 ಹೊಸ ಯೋಜನೆಗಳ ಭರವಸೆ ನೀಡಿದ್ದ ರಾಜ್ಯ ಸರ್ಕಾರ ಅವುಗಳಲ್ಲಿ ಯಾವುದನ್ನೂ ನೆರವೇರಿಸಲಿಲ್ಲ ಎಂದು ಅವರು ದೂರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.