Poster war: ಬೆಳಗಾವಿಯಲ್ಲಿ ಛತ್ರಪತಿ ಶಿವಾಜಿ ಪ್ರತಿಮೆ ಅನಾವರಣ; ಕ್ರೆಡಿಟ್ ತೆಗೆದುಕೊಳ್ಳಲು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಬ್ಯಾನರ್ ಪೈಪೋಟಿ!

ಅರುಣ್​ ಕುಮಾರ್​ ಬೆಳ್ಳಿ

Updated on: Mar 02, 2023 | 12:11 PM

ಬಿಜೆಪಿ ಪಕ್ಷ ಕಟ್ಟುತ್ತಿರುವ ಬ್ಯಾನರ್ ಗಳಲ್ಲಿ ರಮೇಶ್ ಜಾರಕಿಹೊಳಿ ಮತ್ತು ಸಂಜಯ ಪಾಟೀಲ್ ಅವರ ಫೋಟೋಗಳಿದ್ದರೆ ಕಾಂಗ್ರೆಸ್ ಕಟ್ಟುತ್ತಿರುವ ಬ್ಯಾನರ್ ಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಫೋಟೋ ಇದೆ.

ಬೆಳಗಾವಿ: ರಾಜ್ಯ ಸರ್ಕಾರದಿಂದ ಗುರುವಾರ ಬೆಳಗಾವಿ ರಾಜಹಂಸಗಡ್ ದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ (Chhatrapati Shivaji Maharaj) ಪ್ರತಿಮೆ ಅನಾವರಣ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಮುಖ್ಯಮಂತ್ರಿ ಬಸವರಾಜ್ ಎಸ್ ಬೊಮ್ಮಾಯಿ (Basavaraj S Bommai) ಅವರು ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಚುನಾವಣಾ ಸಮಯವಾಗಿರುವುದರಿಂದ ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರಿಂದ ಪೋಸ್ಟರ್ ಮತ್ತು ಬ್ಯಾನರ್ ಗಳನ್ನು (banner) ಕಟ್ಟಿ ಕಾರ್ಯಕ್ರಮದ ಕ್ರೆಡಿಟ್ ತೆಗೆದುಕೊಳ್ಳಲು ಪೈಪೋಟಿ ನಡೆದಿದೆ. ಬಿಜೆಪಿ ಪಕ್ಷ ಕಟ್ಟುತ್ತಿರುವ ಬ್ಯಾನರ್ ಗಳಲ್ಲಿ ರಮೇಶ್ ಜಾರಕಿಹೊಳಿ ಮತ್ತು ಸಂಜಯ ಪಾಟೀಲ್ ಅವರ ಫೋಟೋಗಳಿದ್ದರೆ ಕಾಂಗ್ರೆಸ್ ಕಟ್ಟುತ್ತಿರುವ ಬ್ಯಾನರ್ ಗಳಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಫೋಟೋ ಇದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 02, 2023 12:10 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.