AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Siddaramaiah: ಮತದಾರರ ಪಟ್ಟಿ ನವೀಕರಣ ದುರ್ಬಳಕೆ ಹಿಂದೆ ಸಿಎಂ ಬೊಮ್ಮಾಯಿ ಕೈವಾಡ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

Siddaramaiah: ಮತದಾರರ ಪಟ್ಟಿ ನವೀಕರಣ ದುರ್ಬಳಕೆ ಹಿಂದೆ ಸಿಎಂ ಬೊಮ್ಮಾಯಿ ಕೈವಾಡ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ

TV9 Web
| Updated By: ಅಕ್ಷತಾ ವರ್ಕಾಡಿ

Updated on:Nov 17, 2022 | 11:37 AM

ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಅಂತಾ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ(Karnataka Assembly Election 2023) ಸಂಬಂಧಿಸಿದಂತೆ ಈಗಾಗಲೇ ಪಕ್ಷ- ಪ್ರತಿ ಪಕ್ಷಗಳ ನಡುವೆ ಆರೋಪ ಪ್ರತ್ಯಾರೋಪಗಳು ಆರಂಭವಾಗಿದೆ.

ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅನುಮತಿ ದುರ್ಬಳಕೆ ಹಿಂದೆ ಸಿಎಂ ಬಸವರಾಜ ಬೊಮ್ಮಾಯಿ ಇದ್ದಾರೆ ಅಂತಾ ಕೆಪಿಸಿಸಿ ಕಚೇರಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ನೇರವಾಗಿ ಅಕ್ರಮದಲ್ಲಿ ಭಾಗಿಯಾಗಿದ್ದಾರೆ. ವಾಮ ಮಾರ್ಗದಲ್ಲಿ ಚುನಾವಣೆಯಲ್ಲಿ ಗೆಲ್ಲಲು ಯತ್ನ ನಡೆಸಿದ್ದಾರೆ. ವೋಟರ್​ ಐಡಿ ತಿದ್ದುಪಡಿ ಮಾಡಿರುವುದು ಅಕ್ಷಮ್ಯ ಅಪರಾಧ. ತಕ್ಷಣ ಸಿಎಂ ಬಸವರಾಜ ಬೊಮ್ಮಾಯಿ ಅರೆಸ್ಟ್ ಮಾಡಬೇಕು ಅಂತಾ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Published on: Nov 17, 2022 11:33 AM