ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್

[lazy-load-videos-and-sticky-control id=”https://youtu.be/D7JyHb1y9eM”] ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ […]

ಕೋವಿಡ್ ಎಮರ್ಜೆನ್ಸಿ! ಅಂಬುಲೆನ್ಸ್ ಖರೀದಿಗೆ CM ಯಡಿಯೂರಪ್ಪ ಗ್ರೀನ್ ಸಿಗ್ನಲ್
ರಾಜಧಾನಿ ಬೆಂಗಳೂರಿನಲ್ಲಿ ಕ್ಷಣಕ್ಷಣಕ್ಕೂ ಹೊಸ ಸಮಸ್ಯೆಗಳು ಸೃಷ್ಟಿ, ಹಣ ಕೊಟ್ರೂ ಕೊರೊನಾ ಡೆಡ್‌ಬಾಡಿಗೆ ಸಿಗ್ತಿಲ್ಲ ಮುಕ್ತಿ
ಸಾಧು ಶ್ರೀನಾಥ್​

Updated on: Jul 17, 2020 | 4:21 PM

[lazy-load-videos-and-sticky-control id=”https://youtu.be/D7JyHb1y9eM”]

ಬೆಂಗಳೂರು:ನಗರದಲ್ಲಿ ದಿನೇ ದಿನೇ ಕೊರೊನಾ ಪಾಸಿಟಿವ್ ಪ್ರಕರಣಗಳು ವಿಪರೀತ ಹೆಚ್ಚಾಗುತ್ತಿರುವುದು ಆಡಳಿತ ವರ್ಗಕ್ಕೆ ದೊಡ್ಡ ತಲೆನೋವಾಗಿದೆ. ಕೊರೊನಾ ಸೋಂಕಿತರನ್ನು ಆಸ್ಪತ್ರೆಗೆ ಸಾಗಿಸಲು ಆಂಬುಲೆನ್ಸ್ ವಾಹನಗಳ ಕೊರತೆ ಉಂಟಾಗಿರುವುದು ನುಂಗಾಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

ಆದ ಕಾರಣ ಸಿಎಂ ಬಿ.ಎಸ್. ಯಡಿಯೂರಪ್ಪ ನಗರದಲ್ಲಿ ಅಂಬುಲೆನ್ಸ್ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಮತ್ತಷ್ಟು ಅಂಬುಲೆನ್ಸ್ ಖರೀದಿಗೆ ಸೂಚನೆ ನೀಡಿದ್ದಾರೆ. ಅಷ್ಟೇ ಅಲ್ಲದೆ ಪ್ರತಿ 50 ಬೆಡ್ ಇರುವ ಆಸ್ಪತ್ರೆಗೆ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವುದರ ಜೊತೆಗೆ ನಿಮ್ಮ ನಿಮ್ಮ ವಲಯಗಳಲ್ಲಿ ಆಗುವ ಅನಾಹುತಗಳಿಗೆ ನೀವೇ ಜವಾಬ್ದಾರಿ ಎಂಬ ಖಡಕ್ ವಾರ್ನಿಂಗನ್ನು ನೋಡಲ್ ಅಧಿಕಾರಿಗಳಿಗೆ ನೀಡಿದ್ದಾರೆ. ಹಾಗೆಯೇ ನಿಮ್ಮ ನಿಮ್ಮ ವಲಯದಲ್ಲಿನ ಸೋಂಕಿತರರಿಗೆ ನಿಮ್ಮ ವಲಯದಲ್ಲಿಯೇ ಚಿಕಿತ್ಸೆಗೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂಬ ಸೂಚನೆಯನ್ನು ಸಹ ನೀಡಿದ್ದಾರೆ.

Published On - 1:25 pm, Fri, 17 July 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us