ಬೆಂಗಳೂರು, ಸೆಪ್ಟೆಂಬರ್ 11: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆಯ ಕೂಗು ಜೋರಾಗಿದೆ. ಪ್ರತಿಯೊಬ್ಬರು ಅವಕಾಶ ಸಿಕ್ಕರೇ ನಾನು ಸಿಎಂ ಆಗುತ್ತೆ ಎನ್ನುತ್ತಿದ್ದಾರೆ. ಇದೆಲ್ಲದರ ನಡುವೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ (Siddaramaiah) ಸಿಎಂ ಕುರ್ಚಿ ಖಾಲಿ ಇಲ್ಲ. ನಾನೇ ಮುಂದುವರಿಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೂ ಹೇಳಿಕೆ ಕೊಟ್ಟಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ. ಯಾವುದೇ ಡೌಟು ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. ವಿಡಿಯೋ ನೋಡಿ.
ವರದಿ: ಈರಣ್ಣ ಬಸವ
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.