ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಸಿಎಂಗೆ ಹೂಮಳೆಗರೆದು ಸ್ವಾಗತ
ಮಂಗಳೂರಲ್ಲಿ ನಡೆಯಲಿರುವ ಸಂಪುಟ ಸಭೆಗೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕದ್ರಿ ಮಂಜುನಾಥ ದೇವಸ್ಥಾನಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರಿಗೆ ಪೂರ್ಣಕುಂಭ ಸ್ವಾಗತ ದೊರೆಯಿತು. ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿ ಹೂಮಳೆಗರೆದು ಸ್ವಾಗತಿಸಿದರು. ಮುಖ್ಯಮಂತ್ರಿಗಳು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ನಾಡಿಗೆ ಒಳಿತು ಕೋರಿದರು.
ಮಂಗಳೂರು, ಸೆಪ್ಟೆಂಬರ್ 18: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಂಗಳೂರಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಗೂ ಮುನ್ನ ತಮ್ಮ ಸಂಪುಟ ಸಹೋದ್ಯೋಗಿಗಳ ಜೊತೆಗೆ ಕದ್ರಿಯ ಮಂಜುನಾಥ ಸ್ವಾಮಿ ದೇಗುಲಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿಗಳನ್ನು ಪೂರ್ಣಕುಂಭದೊಂದಿಗೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಭಕ್ತರು ಸ್ವಾಗತಿಸಿದ್ದಾರೆ. ಕಂದಾಯ ಇಲಾಖೆಯ ಮಹಿಳಾ ಸಿಬ್ಬಂದಿ ಹೂಮಳೆಗರೆದು ಸಿಎಂ ಅವರನ್ನು ಸ್ವಾಗತಿಸಿದ್ದು ವಿಶೇಷವಾಗಿತ್ತು.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Sep 18, 2026 12:13 PM
Loading...
Unable to load recommendations.
Follow Us
