AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆ ಶಿವಕುಮಾರ್ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ

ಬಿಕೆ ಹರಿಪ್ರಸಾದ್ ಅಸಮಾಧಾನಕ್ಕೆ ಡಿಕೆ ಶಿವಕುಮಾರ್ ಸ್ಙಷ್ಟನೆ: ಅಂತೆ ಕಂತೆಗಳಿಗೆ ತೆರೆ

ಪ್ರಶಾಂತ್​ ಬಿ.
| Edited By: |

Updated on: Sep 14, 2026 | 12:50 PM

Share

ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್​ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್​​ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಬೆಂಗಳೂರು, (ಸೆಪ್ಟೆಂಬರ್ 14): ಡಿಕೆ ಶಿವಕುಮಾರ್ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಮೊನ್ನೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ಅದ್ಧೂರಿಯಾಗಿ ಶತಕದ ಸಂಭ್ರಮವನ್ನು ಆಚರಿಸಲಾಗಿದ್ದು, ಇದಕ್ಕೆ ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರಿಗೆ ಆಹ್ವಾನ ನೀಡಿದಿದ್ದಕ್ಕೆ ಅವರು ಅಸಮಾಧಾನಗೊಂಡಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಸಂಬಂಧ ಇದಕ್ಕೆ ಸ್ವತಃ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಎಲ್ಲಾ ಪಕ್ಷದ ಶಾಸಕರನ್ನೂ ಕರೆದಿದ್ದೇವೆ. ನಮ್ಮ ಪಕ್ಷದ ಅಧ್ಯಕ್ಷರಿಗೂ ಕಾರ್ಯಕ್ರಮಕ್ಕೆ ಆಹ್ವಾನ ಮಾಡಲಾಗಿದೆ. ಪ್ರೋಟೋಕಾಲ್​ನಿಂದಾಗಿ ವೇದಿಕೆ ಮೇಲೆ ಕರೆದಿಲ್ಲ. ಬಿ.ಕೆ.ಹರಿಪ್ರಸಾದ್​​ಗೆ ಆಹ್ವಾನ ನೀಡಿಲ್ಲ ಅಂತಾ ಯಾರು ಹೇಳಿದ್ದು? ಪಕ್ಷದ ಜೊತೆಗೆ ನಾವು ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us