AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್

ಗಣಪತಿ ಶರ್ಮಾ
|

Updated on: Jun 23, 2026 | 7:11 AM

Share

ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಯನ್ನು ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇತ್ತೀಚಿನ ಬೆಳವಣಿಗೆಗಳ ಕುರಿತು ಗಣ್ಯರು ಹಾಗೂ ಸ್ವಾಮೀಜಿಗಳ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ.

ಬೆಂಗಳೂರು, ಜೂನ್ 23: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರಿನ ವಿಜಯನಗರದಲ್ಲಿರುವ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರನ್ನು ಸೋಮವಾರ ರಾತ್ರಿ ಭೇಟಿಯಾದರು. ಸಚಿವ ಎನ್. ಚಲುವರಾಯಸ್ವಾಮಿ, ಶಾಸಕ ರವಿ ಗಣಿಗ ಸಹ ಸಿಎಂ ಅವರೊಂದಿಗೆ ಸ್ವಾಮೀಜಿಗಳ ಭೇಟಿಯಾದರು. ಈ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ. ಸಿಎಂ ಜೊತೆ ಬಂದು ಶ್ರೀಗಳ ಆಶೀರ್ವಾದ ಪಡೆದಿದ್ದೇವೆ ಅಷ್ಟೆ ಎಂದು ರವಿ ಗಣಿಗ ಹೇಳಿದ್ದಾರೆ. ಸ್ವಾಮೀಜಿಗಳನ್ನು ಭೇಟಿ ಮಾಡಿ ಬಹಳ ದಿನಗಳಾಗಿತ್ತು. ಅದಕ್ಕಾಗಿ ಸಿಎಂ ಜೊತೆ ಬಂದು ಶ್ರೀಗಳನ್ನು ಭೇಟಿಯಾದೆವು ಅಷ್ಟೆ. ಅದು ಬಿಟ್ಟು ಯಾವುದೇ ರಾಜಕೀಯ ಮಾತನಾಡಿಲ್ಲ ಎಂದು ಚಲುವರಾಯಸ್ವಾಮಿ ಸಹ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us