ಕರ್ನಾಟಕದ ಜಲ ಪ್ರದೇಶಗಳನ್ನು ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಜಲಸಂಪನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದು, CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಸುಪ್ರೀಂಕೋರ್ಟ್, CWMAಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡಿದ್ದು, ಈ ಬಗ್ಗೆ ಕಾನೂನು ತಜ್ಞರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ನವದೆಹಲಿ, (ಜುಲೈ 29): ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಕುಡಿಯುವ ನೀರಿಗೂ ಬರ ಎದುರಾಗಿದೆ. ಇದರ ಮಧ್ಯೆ CWRC ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 3500 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಆದೇಶಿಸಿದೆ. ಈ ಆದೇಶಕ್ಕೆ ಕರ್ನಾಟಕದಲ್ಲಿ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದು, ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಬಿಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಗಳು ವ್ಯಕ್ತವಾಗುತ್ತಿವೆ. ಇನ್ನು CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ನವದೆಹಲಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್, ಜಲಸಂಪನ್ಮೂಲ ಸಚಿವರು, ಅಧಿಕಾರಿಗಳ ಜೊತೆ ಚರ್ಚಿಸಿದ್ದು, CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸಲು ನಿರ್ಧರಿಸಿದ್ದೇವೆ. ಸುಪ್ರೀಂಕೋರ್ಟ್, CWMAಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ನಿರ್ಧಾರ ಮಾಡಿದ್ದು, ಈ ಬಗ್ಗೆ ಕಾನೂನು ತಜ್ಞರು ಸಿದ್ಧತೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.
ನಮಗೆ ವರುಣ ಕೃಪೆ ತೋರಿಸಿಲ್ಲ. 2 ಸಲ ತಮಿಳುನಾಡು ಮನವಿ ತಿರಸ್ಕರಿಸಿತ್ತು. ಈ ಸಲ ಆದೇಶ ನೀಡಿದೆ.
ನಾವು ಇದರ ವಿರುದ್ಧ ಮೇಲ್ಮನವಿ ಸಲ್ಲಿಸುವುದಕ್ಕೆ ತೀರ್ಮಾನಿಸಿದ್ದೇವೆ. ಈ ಬಗ್ಗೆ ವಿಪಕ್ಷಗಳ ನಾಯಕರ ಜೊತೆಗೆ ಚರ್ಚೆ ಮಾಡುತ್ತೇನೆ. ತಮಿಳುನಾಡು ಸಿಎಂ ಕೂಡಾ ಬಂದು ಮಾತನಾಡುತ್ತಾರೆ. ಫೋನ್ನಲ್ಲಿ ಮಾತನಾಡಿದ್ದಾರೆ, ನಾವು ಗೌರವದಿಂದ ಬನ್ನಿ ಅಂದಿದ್ದೇವೆ. ನಮ್ಮ ರಾಜ್ಯದ ಜಲ ಪ್ರದೇಶಗಳನ್ನು ನೋಡಲು ಮನವಿ ಮಾಡಿದ್ದು, ಹೆಲಿಕಾಪ್ಟರ್ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದೇನೆ. ಸೌಹಾರ್ದಯುತವಾಗಿ ಚರ್ಚೆ ಮಾಡಬೇಕಿದೆ, ಅವರ ಉದ್ದೇಶ ಗೊತ್ತಿಲ್ಲ. ಬರ್ತೀನಿ ಅಂದ್ರು, ಗೌರವದಿಂದ ಬರಮಾಡಿಕೊಳ್ಳುತ್ತೇವೆ ಎಂದರು.
