ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ ಎಚ್ಚರಿಕೆಯು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಟಿ. ನರಸೀಪುರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಅಲ್ಲದೇ ಇನ್ಸ್ಪೆಕ್ಟರ್ನ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅಶಾಂತಿ ಮೂಡಿಸೋಕೆ ದೊಡ್ಡ ಕುತಂತ್ರ ನಡೆಯುತ್ತಿದೆ. ದೊಡ್ಡ ಕುತಂತ್ರ ನಡೆಯುತ್ತಿದೆ ಎಂದು ನಮಗೆ ಅರಿವಿದೆ. ಅವರು ಏನೂ ಬೇಕಾದ್ರೂ ಮಾಡಲಿ. ಪೊಲೀಸರಿಗೆ ಹುಷಾರಾಗಿರಿ ಎಂದು ನಾವು ಹೇಳಿದ್ದೇವೆ. ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ, ಗಣೇಶ ಎಲ್ಲರ ಆಸ್ತಿ. ಎಲ್ಲಿ ಬೇಕಾದ್ರೂ ಹೋಗಲಿ, ಏನು ಬೇಕಾದ್ರೂ ಮಾಡಲಿ. ಅವರ ಪರಿಮಿತಿಯಲ್ಲಿ ಅವರು ಮಾಡಲಿ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ಬೆಂಗಳೂರು (ಸೆಪ್ಟೆಂಬರ್ 13): ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ ಎಚ್ಚರಿಕೆಯು ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿ ನಾಯಕರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಟಿ. ನರಸೀಪುರಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿದ್ದಾರೆ. ಅಲ್ಲದೇ ಇನ್ಸ್ಪೆಕ್ಟರ್ನ ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದೆಡೆ ಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದು, ಅಶಾಂತಿ ಮೂಡಿಸೋಕೆ ದೊಡ್ಡ ಕುತಂತ್ರ ನಡೆಯುತ್ತಿದೆ. ದೊಡ್ಡ ಕುತಂತ್ರ ನಡೆಯುತ್ತಿದೆ ಎಂದು ನಮಗೆ ಅರಿವಿದೆ. ಅವರು ಏನೂ ಬೇಕಾದ್ರೂ ಮಾಡಲಿ. ಪೊಲೀಸರಿಗೆ ಹುಷಾರಾಗಿರಿ ಎಂದು ನಾವು ಹೇಳಿದ್ದೇವೆ. ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ, ಗಣೇಶ ಎಲ್ಲರ ಆಸ್ತಿ. ಎಲ್ಲಿ ಬೇಕಾದ್ರೂ ಹೋಗಲಿ, ಏನು ಬೇಕಾದ್ರೂ ಮಾಡಲಿ. ಅವರ ಪರಿಮಿತಿಯಲ್ಲಿ ಅವರು ಮಾಡಲಿ ಅಷ್ಟೇ ಎಂದು ಸ್ಪಷ್ಟಪಡಿಸಿದರು.
ನಾವೆಲ್ಲಾ ಹಿಂದೂಗಳು ಅಲ್ಲವಾ, ಅವರದ್ದೆಲ್ಲಾ ಬರೀ ನಾಟಕ. ರಾಮನ ದುಡ್ಡೇ ಹೊಡೆದು ಬಿಟ್ಟಿದ್ದಾರಲ್ಲ. ನಿಮ್ಮ ಬೆವರೂ ಉಪ್ಪು, ನನ್ನ ಬೆವರೂ ಉಪ್ಪು.ಅವರದ್ದೇನಾದರೂ ಸಪರೇಟ್ ಇದೆಯಾ ಬ್ಲಡ್ಡು? ಎಲ್ಲ ಜಾತಿಗಳನ್ನೂ ಒಳಗೊಂಡಂತೆ ಧರ್ಮ ನಮ್ಮದು ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು.
ಕರ್ನಾಕಟದ ಮತ್ರಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
