ನಾಳೆ ಪ್ರಧಾನಿ ಮೋದಿ-ಸಿಎಂ ಡಿ.ಕೆ. ಶಿವಕುಮಾರ್ ಭೇಟಿ: ಕೇಂದ್ರ ಸಚಿವರ ಜತೆಗೂ ಮಾತುಕತೆಗೆ ಪ್ಲಾನ್
ಕರ್ನಾಟಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ಭೇಟಿಯಲ್ಲಿ ರಾಜ್ಯದ ಪ್ರಮುಖ ನೀರಾವರಿ ಮತ್ತು ಆರ್ಥಿಕ ಯೋಜನೆಗಳ ಕುರಿತು ಚರ್ಚೆ ನಡೆಸಲಿದ್ದಾರೆ. ಮುಖ್ಯಮಂತ್ರಿಗಳು ನೀತಿ ಆಯೋಗದ ಸಭೆಯಲ್ಲಿ ಸಹ ಪಾಲ್ಗೊಳ್ಳಲಿದ್ದು, ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಇದು ರಾಜ್ಯದ ಅಭಿವೃದ್ಧಿಗೆ ಸಹಕಾರ ಪಡೆಯುವ ಪ್ರಥಮ ಅಧಿಕೃತ ಭೇಟಿಯಾಗಿದೆ.
ದೆಹಲಿ, ಜೂ.10: ಕರ್ನಾಟಕದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ರಾಷ್ಟ್ರ ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಡಿ.ಕೆ. ಶಿವಕುಮಾರ್ ಅವರು ನಾಳೆ (ಜೂ.11) ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕೃತವಾಗಿ ಭೇಟಿ ಮಾಡಲಿದ್ದಾರೆ. ಪ್ರಧಾನಮಂತ್ರಿಯವರ ಭೇಟಿಗೆ ಅಧಿಕೃತ ಸಮಯ ಸಿಕ್ಕಿರುವುದನ್ನು ಖಚಿತಪಡಿಸಿರುವ ಸಿಎಂ, ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಹಲವು ಪ್ರಮುಖ ವಿಷಯಗಳನ್ನು ಹಂಚಿಕೊಂಡಿದ್ದಾರೆ. “ನಾನು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ನನಗೆ ದೂರವಾಣಿ ಕರೆ ಮಾಡಿ ಅಭಿನಂದನೆಗಳನ್ನು ತಿಳಿಸಿದ್ದರು. ಜೊತೆಗೆ ರಾಜ್ಯದ ಅಭಿವೃದ್ಧಿಗೆ ಅಗತ್ಯ ಸಹಕಾರ ಕೊಡುವುದಾಗಿಯೂ ಭರವಸೆ ನೀಡಿದ್ದರು. ನಾಳೆ ಅವರ ಭೇಟಿಗೆ ಸಮಯ ನಿಗದಿಯಾಗಿದ್ದು, ಪ್ರಧಾನಿಯವರನ್ನು ಭೇಟಿಯಾಗಿ ರಾಜ್ಯದ ಪ್ರಮುಖ ನೀರಾವರಿ ಹಾಗೂ ಆರ್ಥಿಕ ಯೋಜನೆಗಳ ಕುರಿತು ಮಾತುಕತೆ ನಡೆಸಲಾಗುವುದು” ಎಂದು ಸಿಎಂ ತಿಳಿಸಿದ್ದಾರೆ. ನಾಳೆ ದೆಹಲಿಯಲ್ಲಿ ನಡೆಯಲಿರುವ ‘ನೀತಿ ಆಯೋಗ’ದ (NITI Aayog) ಸಭೆಯಲ್ಲಿ ಮುಖ್ಯಮಂತ್ರಿಗಳು ಭಾಗವಹಿಸಲಿದ್ದಾರೆ. ಇದರೊಂದಿಗೆ ದೆಹಲಿಯಲ್ಲೇ ಇರುವ ಕೆಲವು ಪ್ರಮುಖ ಕೇಂದ್ರ ಸಚಿವರನ್ನು ಭೇಟಿ ಮಾಡಲು ಸಹ ಸಿಎಂ ಸಮಯ ಕೋರಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
