AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​:  ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​​: ಘಟನೆ ಇನ್​​​​ಸೈಡ್ ಮಾಹಿತಿ ಬಿಚ್ಚಿಟ್ಟ ಸಿಎಂ ಡಿಕೆಶಿ

Gopal AS
| Edited By: |

Updated on: Aug 16, 2026 | 4:15 PM

Share

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಲಾಗಿದೆ.

ಕೊಡಗು, (ಆಗಸ್ಟ್ 16): ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಯಿಂದ ನಡೆದ ಶೂಟೌಟ್‌ನಲ್ಲಿ ಮೂವರು ಹತ್ಯೆಯಾಗಿದ್ದಾರೆ. ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಬ್ಬೊಬ್ಬರು ಒಂದೊಂದು ರೀತಿ ಹೇಳುತ್ತಿದ್ದಾರೆ. ಮೃತರು ಪ್ರಾಣಿಗಳ ಬೇಟೆಗೆ ಬಂದಿದ್ದು, ಈ ದಾಳಿ ನಡೆಸಿದ್ದಕ್ಕೆ ಆತ್ಮ ರಕ್ಷಣೆಗೆ ಅರಣ್ಯ ಇಲಾಖೆ ಸಿಬ್ಬಂದಿ ಸಹ ಪ್ರತಿ ದಾಳಿ ನಡೆಸಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನೊಂದೆಡೆ ಘಟನೆಯಿಂದ ಎಸ್ಕೇಪ್ ಆಗಿ ಬಂದಿರುವ ಮತ್ತೋರ್ವ, ಇದನ್ನು ಅಲ್ಲಗಳೆದಿದ್ದು, ಹೀಗಾಗಿ ಅಸಲಿಗೆ ಆಗಿದ್ದೇನು ಎನ್ನುವುದೇ ನಿಗೂಢವಾಗಿದೆ. ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ತನಿಖೆಗೆ ನೀಡಲಾಗಿದೆ.

ಇನ್ನು ಈ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಡಿಕೆ ಶಿವಕುಮಾರ್,ಘಟನಾ ಸ್ಥಳದಲ್ಲಿ ಕೋವಿಗಳು ದೊರೆತ್ತಿವೆ. ಹಾಗೇ ಮಾಂಸ ಸಿಕ್ಕಿದೆ. ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಇನ್ನು ಮೃತರ ಕುಟುಂಬದವರಿಗೆ ಎಷ್ಟು ಪರಿಹಾರ ಕೊಡಬಹುದು ಎಂದು ಚಿಂತಿಸಲಾಗುತ್ತಿದೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us