AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುರ್ಜೇವಾಲಾ ನೀಡಿದ ಮಾಹಿತಿಯನ್ನು ಆಧರಿಸಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ: ಶಿವಕುಮಾರ್

ಸುರ್ಜೇವಾಲಾ ನೀಡಿದ ಮಾಹಿತಿಯನ್ನು ಆಧರಿಸಿ ಶಾಸಕರೊಂದಿಗೆ ಮುಖ್ಯಮಂತ್ರಿ ಸಭೆ ನಡೆಸುತ್ತಿದ್ದಾರೆ: ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 29, 2025 | 1:25 PM

Share

ಬಿಜೆಪಿ ನಾಯಕರು ನೀಡುತ್ತಿರುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್, ಮೊದಲು ಅವರು ತಮ್ಮ ಪಕ್ಷದ ಆಂತರಿಕ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲಿ ಎಂದು ಹೇಳಿ, ಅಧಿಕಾರಿಗಳೊಂದಿಗೆ ಇವತ್ತು ಮೀಟಿಂಗ್ ನಡೆಸಿ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಬೇಕಿದೆ, ಗ್ರೇಟರ್ ಬೆಂಗಳೂರು ಪ್ರಾಧಿಕಾರವನ್ನು ರಚಿಸಲಾಗಿದೆ, ಆಡಳಿತಾತ್ಮಕ ಅಂಶಗಳನ್ನು ಸುರಳೀತಗೊಳಿಸಲು ಮತ್ತು ನಗರದ ಹಿತಾಸಕ್ತಿಗೋಸ್ಕರ ಬಿಬಿಎಂಪಿಯನ್ನು ವಿಂಗಡಿಸಿದ್ದೇವೆ ಎಂದರು.

ಬೆಂಗಳೂರು, ಜುಲೈ 29: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ಪಕ್ಷದ ಶಾಸಕರೊಂದಿಗೆ ಸಭೆ ನಡೆಸುತ್ತಿದ್ದಾರೆ, ಬೆಂಗಳೂರು ಶಾಸಕರ ಸಭೆ ನಂತರ ನಡೆಯಲಿದೆ, ಆದರೆ ಪಾರ್ಟಿ ಅಧ್ಯಕ್ಷ ಡಿಕೆ ಶಿವಕುಮಾರ್ ಇವತ್ತಿನ ಸಭೆಯಲ್ಲಿ ಪಾಲ್ಗೊಳ್ಳುತ್ತಿಲ್ಲ. ಯಾಕೆ ಅಂತ ಕೇಳಿದರೆ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೆವಾಲಾ ಶಾಸಕರೊಂದಿಗೆ ಮಾತುಕತೆ ನಡೆಸಿ ವಿವರಗಳನ್ನು ಮುಖ್ಯಮಂತ್ರಿಯವರಿಗೆ ನೀಡಿದ್ದಾರೆ, ಅವರು ನೀಡಿರುವ ಇನ್​ಪುಟ್ಸ್​ ಆಧರಿಸಿ ಮುಖ್ಯಮಂತ್ರಿಯವರು ಶಾಸಕರ ಕುಂದು ಕೊರತೆಗಳನ್ನು ವಿಚಾರಿಸಲಿದ್ದಾರೆ ಎಂದು ಹೇಳಿದರು. ಸಭೆಗೆ ಹೋಗದಿರುವುದು ಮಾಧ್ಯಮದವರಿಗೆ ಹೆಚ್ಚಿನ ಕುತೂಹಲ ಮೂಡಿಸಿದಂತಿದೆ ಅಂತ ಶಿವಕುಮಾರ್ ಹೇಳಿದಾಗ; ಪತ್ರಕರ್ತರೊಬ್ಬರು ಯಾಕೆ ಸಭೆಗೆ ಹೋಗಿಲ್ಲ ಅಂತ ಕೇಳೋದು ತಪ್ಪಾ ಸರ್ ಅಂದಾಗ, ಡಿಸಿಎಂ ಕನ್ನಡದಲ್ಲಿ ಹೇಳಿದ್ದನ್ನೇ ಇಂಗ್ಲಿಷ್​​ನಲ್ಲಿ ಹೇಳುತ್ತಾರೆ.

ಇದನ್ನೂ ಓದಿ:  ಒಂದು ವಾರದಿಂದ ಡಿಸಿಎಂ ಟೆಂಪಲ್ ರನ್: ಸಿಎಂ ಗಾದಿಗಾಗಿ ರಹಸ್ಯ ಪೂಜೆ ಮಾಡಿದ್ರಾ ಡಿಕೆ ಶಿವಕುಮಾರ್?

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.