Assembly Polls: ವರುಣಾದಿಂದ ಸ್ಪರ್ಧಿಸುವಂತೆ ಆಪ್ತಮಿತ್ರ ಸಿದ್ದರಾಮಯ್ಯಗೆ ಸಲಹೆ ನೀಡಿದ ಸಿ ಎಮ್ ಇಬ್ರಾಹಿಂ

ಅರುಣ್​ ಕುಮಾರ್​ ಬೆಳ್ಳಿ

Updated on: Feb 14, 2023 | 6:34 PM

ಕಳೆದ ಬಾರಿಯ ಚುನಾವಣೆಯಲ್ಲಿ ಬಾದಾಮಿಗೆ ತಾವೇ ಸಿದ್ದರಾಮಯ್ಯನನ್ನು ಕಳಿಸಿದ್ದು, ಈ ಸಲ ಅವರು ಪುನಃ ವಿಧಾನ ಸಭೆಗೆ ಬರಬೇಕಾದರೆ ವರುಣದಿಂದ ಸ್ಪರ್ಧಿಸಬೇಕೆಂದು ಇಬ್ರಾಹಿಂ ಹೇಳಿದರು.

ಕೋಲಾರ: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ ಎಮ್ ಇಬ್ರಾಹಿಂ (CM Ibrahim) ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಪ್ರಾಯಶಃ ಅರ್ಧ ಶತಮಾನದಿಂದ ದೋಸ್ತಿಗಳು. ಜೊತೆಯಾಗೇ ರಾಜಕಾರಣದಲ್ಲಿ ಬೆಳೆದವರು. ಈಗ ಬೇರೆ ಬೇರೆ ಪಕ್ಷಗಳಲ್ಲಿದ್ದಾರೆ, ಇಬ್ರಾಹಿಂ ಅವರು ಸಿದ್ದರಾಮಯ್ಯನವರ ಬಗ್ಗೆ ಕಾಮೆಂಟ್ ಮಾಡುತ್ತಿರುತ್ತಾರೆ ಆದರೆ ಸಿದ್ದರಾಮಯ್ಯ ಇಬ್ರಾಹಿಂ ಬಗ್ಗೆ ಮಾತಾಡೋದು ಬಹಳ ಕಮ್ಮಿ. ಇಂದು ಕೋಲಾರದಲ್ಲಿ (Kolar) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಇಬ್ರಾಹಿಂ, ಕಳೆದ ಬಾರಿಯ ಚುನಾವಣೆಯಲ್ಲಿ ಬಾದಾಮಿಗೆ ತಾವೇ ಸಿದ್ದರಾಮಯ್ಯನನ್ನು ಕಳಿಸಿದ್ದು, ಈ ಸಲ ಅವರು ಪುನಃ ವಿಧಾನ ಸಭೆಗೆ ಬರಬೇಕಾದರೆ ವರುಣದಿಂದ ಸ್ಪರ್ಧಿಸಬೇಕೆಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.