AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರಿನ ಮೈಲಾರಿ ಹೋಟೆಲ್​ಗೆ ಮತ್ತೊಮ್ಮೆ ತೆರಳಿ ಇಡ್ಲಿ, ದೋಸೆ ಸವಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರಿನ ಮೈಲಾರಿ ಹೋಟೆಲ್​ಗೆ ಮತ್ತೊಮ್ಮೆ ತೆರಳಿ ಇಡ್ಲಿ, ದೋಸೆ ಸವಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 01, 2025 | 2:21 PM

Share

ಹಿಂದೊಮ್ಮೆ ಸಿದ್ದರಾಮಯ್ಯನವರೇ ಹೇಳಿದಂತೆ ಕಾಲೇಜಿನಲ್ಲಿ ಓದುವ ದಿನಗಳಲ್ಲೂ ಅವರು ಮೈಲಾರಿ ಹೋಟೆಲ್ ಗೆ ಬಂದು ತಿಂಡಿ ಮೆಲ್ಲುತ್ತಿದ್ದರಂತೆ. ಆಗೆಲ್ಲ 8 ಪೈಸೆ, 10 ಪೈಸೆಗೆ ದೋಸೆ ಸಿಗುತಿತ್ತು ಅಂತ ಅವರು ಹೇಳುತ್ತಾರೆ. ಮೈಲಾರಿ ಹೋಟೆಲ್ ದೋಸೆ ಮೇಲೆ ಬೆಣ್ಣೆ ಇರೋದನ್ನು ಗಮನಿಸಬಹುದು. ದೇಹದಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚುತ್ತದೆ ಅಂತ ಬೆಣ್ಣೆ ಮತ್ತು ತುಪ್ಪ ತಿನ್ನಲ್ಲ ಅಂತ ಹಿಂದೆ ಸಿದ್ದರಾಮಯ್ಯ ಹೇಳಿದ್ದುಂಟು.

ಮೈಸೂರು: ನಗರದಲ್ಲಿರುವ ಮೈಲಾರಿ ಹೋಟೆಲ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಅವಿನಾಭಾವ ಸಂಬಂಧ. ನಗರಕ್ಕೆ ಭೇಟಿ ನೀಡಿದಾಗಲೆಲ್ಲ ಅವರು ಈ ಹೋಟೆಲ್ ಗೆ ಹೋಗಿ ತಿಂಡಿ ಸವಿಯುತ್ತಾರೆ. ನಾಡಿನ ಮುಖ್ಯಮಂತ್ರಿಯಾಗಿದ್ದರೂ ಒಬ್ಬ ಜನಸಾಮಾನ್ಯನ ಹಾಗೆ ಅವರು ಮೈಲಾರಿ ಹೋಟೆಲ್​ಗೆ ಬರುತ್ತಾರೆ. ಇವತ್ತು ಸಿಎಂ ಜೊತೆ ಅವರ ಪುತ್ರ ಮತ್ತು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಇದ್ದರು. ಹೋಟೆಲ್ ನವರು ಮುಖ್ಯಮಂತ್ರಿಯವರನ್ನು ಪ್ರೀತಿಯಿಂದ ಬರಮಾಡಿಕೊಂಡು ಬಹಳ ಆಸ್ಥೆಯಿಂದ ತಿಂಡಿಗಳನ್ನು ಸರ್ವ್ ಮಾಡುತ್ತಾರೆ. ಸಿದ್ದರಾಮಯ್ಯ ಮೊದಲಿಗೆ ಇಡ್ಲಿ ನಂತರ ದೋಸೆ ತಿಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮೈಸೂರಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೋಸೆ ತಿನ್ನಲು ಮೈಲಾರಿ ಹೋಟೆಲ್​ಗೆ ಹೋಗದಿರುತ್ತಾರೆಯೇ?

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.