ದಾವಣಗೆರೆ: ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಅಧಿಕಾರ ಹಂಚಿಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ದಿನಕ್ಕೊಂದು ಬೆಳವಣಿಗೆಗಳು ನಡೆಯುತ್ತಿವೆ. ಡಿಸಿಎಂ ಡಿಕೆ ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ ಅವರ ಬಣಗಳ ನಡುವೆ ತಿಕ್ಕಾಟ ನಡೆಯುತ್ತಿದ್ದು, ವಿಷಯ ಹೈಕಮಾಂಡ್ ಮಟ್ಟದಲ್ಲೂ ಚರ್ಚೆಯಲ್ಲಿದೆ. ಈ ನಡುವೆಯೂ ಸಿದ್ದರಾಮಯ್ಯ ಮತ್ತು ಡಿಕೆಶಿ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸಿದ್ದಾರೆ.
ದಾವಣಗೆರೆ. ಡಿಸೆಂಬರ್ 27: ಸಿಎಂ ಕುರ್ಚಿ ವಿಚಾರವಾಗಿ ರಾಜ್ಯ ಕಾಂಗ್ರೆಸ್ನಲ್ಲಿ ಬಣ ಬಡಿದಾಟದ ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಾವಣಗೆರೆಗೆ ಒಂದೇ ಹೆಲಿಕಾಪ್ಟರ್ನಲ್ಲಿ ಜಂಟಿಯಾಗಿ ಪ್ರಯಾಣಿಸಿದ್ದಾರೆ. ನಾಯಕರ ಈ ಜಂಟಿ ಪ್ರಯಾಣ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳ ಕುರಿತ ಊಹಾಪೋಹಗಳಿಗೆ ತೆರೆ ಎಳೆಯುವ ಪ್ರಯತ್ನವಾ ಎಂಬ ಪ್ರಶ್ನೆಯೂ ಉದ್ಭವಿಸಿದೆ. ಅಧಿಕಾರ ಹಂಚಿಕೆ ವಿಚಾರವಾಗಿ ಹೈಕಮಾಂಡ್ ಮಟ್ಟದಲ್ಲೂ ವಿಷಯ ಚರ್ಚೆ ನಡೆಯುತ್ತಿರುವ ಹೊತ್ತಲ್ಲಿ ಸಿಎಂ ಮತ್ತು ಡಿಸಿಎಂ ನಡೆ ನಾನಾ ರಾಜಕೀಯ ವಿಶ್ಲೇಷಣೆಗೆ ಒಳಗಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಹೆಚ್ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್ ಕಾನ್ಸರ್ಟ್ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್ಒ ಸೇತುವೆ

