AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯಲ್ಲಿರುವ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಕರ್ನಾಟಕ ಭವನದಿಂದ ಒಟ್ಟಿಗೆ ಎಐಸಿಸಿ ಕಚೇರಿಗೆ ತೆರಳಿದರು

ದೆಹಲಿಯಲ್ಲಿರುವ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಕರ್ನಾಟಕ ಭವನದಿಂದ ಒಟ್ಟಿಗೆ ಎಐಸಿಸಿ ಕಚೇರಿಗೆ ತೆರಳಿದರು

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 04, 2024 | 12:42 PM

Share

ಮುಂಬರುವ ಲೋಕಸಭಾ ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧತೆ ಮತ್ತು ಸಂಭಾವ್ಯ ಅಭ್ಯರ್ಥಿಗಳ ಬಗ್ಗೆ ಚರ್ಚೆ ನಡೆಸಲು ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರನ್ನು ಎಐಸಿಸಿ ದೆಹಲಿಗೆ ಕರೆಸಿದೆ. ನಿಗಮ/ಮಂಡಳಿಗಳ ಅಧ್ಯಕ್ಷರ ನೇಮಕಾತಿ ಪಟ್ಟಿ ಇನ್ನೂ ಅಂತಿಮಗೊಂಡಿಲ್ಲ, ಅದರ ಬಗ್ಗೆಯೂ ಕಾಂಗ್ರೆಸ್ ನಾಯಕರ ನಡುವೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ದೆಹಲಿ: ಜನವರಿ 4 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar) ದೆಹಲಿಗೆ ತೆರಳಲಿರುವ ಬಗ್ಗೆ ನಾವು ಮೂರು ದಿನಗಳ ಹಿಂದೆ ವರದಿ ಮಾಡಿದ್ದೆವು. ದೆಹಲಿಯ ಕರ್ನಾಟಕ ಭವನದಿಂದ ಇಂದು ಅವರಿಬ್ಬರು ಎಐಸಿಸಿ ಕಚೇರಿಗೆ (AICC office) ಜೊತೆಯಾಗಿ ತೆರಳುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಭವನದಿಂದ ಶಿವಕುಮಾರ್ ಮೊದಲು ಹೊರಬಿದ್ದು ಮುಂದೆ ಸಾಗುತ್ತಾರಾದರೂ, ಸ್ವಲ್ಪ ಸಮಯದ ಬಳಿಕ ಸಿದ್ದರಾಮಯ್ಯರನ್ನು ಮುಂದೆ ಹೋಗಲು ಬಿಟ್ಟು ಒಂದು ಹೆಜ್ಜೆ ಹಿಂದೆ ಸರಿಯುತ್ತಾರೆ. ಮುಖ್ಯಮಂತ್ರಿ ಇದ್ದೆಡೆಯೆಲ್ಲ ಅವರ ಪೊಲಿಟಿಕಲ್ ಸೆಕ್ರೆಟರಿ ಗೋವಿಂದರಾಜ್ ಕಾಣೋದು ವಾಡಿಕೆಯಾಗಿದೆ, ಇಲ್ಲೂ ಅವರನ್ನು ನೋಡಬಹುದು. ಶಿವಕುಮಾರ್ ನಾಯಕರೊಬ್ಬರ ಜೊತೆ ಮಾತಾಡುವಾಗ ಯಾವುದೋ ವಿಷಯಕ್ಕೆ ಸಿಡುಕುವ ಹಾಗೆ ಗೋಚರಿಸುತ್ತಾರೆ. ಕರ್ನಾಟಕ ಭವನದಿಂದ ಆಚೆಬಂದು ಕಾರು ಹತ್ತುವಾಗ ಇಂಗ್ಲಿಷ್ ಮಾಧ್ಯಮದ ವರದಿಗಾರರೊಬ್ಬರು, ಬಿಕೆ ಹರಿಪ್ರಸಾದ್ ಮತ್ತು ಯತೀಂದ್ರ ಸಿದ್ದರಾಮಯ್ಯ ಮೀಡಿರುವ ಹೇಳಿಕೆಗಳ ಬಗ್ಗೆ ಕಾಮೆಂಟ್ ಮಾಡಬಯಸುತ್ತೀರಾ ಅಂತ ಕೇಳಿದಾಗ, ಸಿದ್ದರಾಮಯ್ಯ ನೋ ಕಾಮೆಂಟ್ಸ್ ಅನ್ನುತ್ತಾ ಕಾರು ಹತ್ತುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More