Siddaramaiah-DK Shivakumar: ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ತಮ್ಮ ನಡುವಿನ ಅಸಮಾಧಾನಗಳನ್ನು ಕೆಮೆರಾಗಳ ಮುಂದೆ ತೋರ್ಪಡಿಸುತ್ತಿಲ್ಲ!
ಖಾದರ್ ನಾಮಪತ್ರ ಸಲ್ಲಿಸಿದ ಬಳಿಕ, ಅವರೊಂದಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಜೊತೆಯಾಗಿ ಹೆಜ್ಜೆ ಹಾಕುತ್ತಾ ಸದನದ ಕಡೆ ನಡೆದುಬಂದರು.
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮತ್ತು ಉಪ-ಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dy CM DK Shivakumar) ನಡುವೆ ಶೀತಲ ಸಮರ ಜಾರಿಯಲ್ಲಿರೋದು ಬಹಿರಂಗ ಸತ್ಯ. ಮೊದಲಿಂದಲೂ ಸಿದ್ದರಾಮಯ್ಯ ಕ್ಯಾಂಪಲ್ಲಿ ಗುರುತಿಸಿಕೊಂಡಿರುವ ಎಂಬಿ ಪಾಟೀಲ್ ಅವರೊಂದಿಗೂ ಶಿವಕುಮಾರ್ ಬಾಂಧವ್ಯ ಸರಿ ಇದ್ದಂತಿಲ್ಲ. ಬಿಡಿ, ಅದೇನೇ ಇರಲಿ, ಸಿದ್ದರಾಮಯ್ಯ ಮತ್ತು ಶಿವಕುಮಾರ್ ತಮ್ಮ ನಡುವಿನ ಅಸಮಾಧಾನ, ಭಿನ್ನಾಭಿಪ್ರಾಯಗಳನ್ನು ಸಾರ್ವಜನಿಕವಾಗಿ ತೋರಿಸಿಕೊಳ್ಳುತ್ತಿಲ್ಲ. ಈ ವಿಡಿಯೋ ನೋಡಿದರೆ ಅದು ವಿದಿತವಾಗುತ್ತದೆ. ಸ್ಪೀಕರ್ ಸ್ಥಾನಕ್ಕೆ ಯುಟಿ ಖಾದರ್ (UT Khader) ನಾಮಪತ್ರ ಸಲ್ಲಿಸಿದ ಬಳಿಕ, ಅವರೊಂದಿಗೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಜೊತೆಜೊತೆಯಾಗಿ ಹೆಜ್ಜೆ ಹಾಕುತ್ತಾ ಸದನದ ಕಡೆ ನಡೆದುಬಂದರು. ಶಿವಕುಮಾರ್ ಮತ್ತು ಸಿದ್ದರಾಮಯ್ಯ ನಗುನಗುತ್ತಾ ಮಾತಾಡುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

