ಜಾತಿಗಣತಿ ಕಾರ್ಯ ವೇಳೆ ಇದುವರೆಗೂ ಮೂವರು ಶಿಕ್ಷಕರು ಸಾವು, ಪರಿಹಾರ ಘೋಷಿಸಿದ ಸಿಎಂ

Updated on: Oct 07, 2025 | 4:52 PM

ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಬೆಂಗಳೂರು, (ಅಕ್ಟೋಬರ್ 07): ಸಾಮಾಜಿಕ, ಶೈಕ್ಷಣಿಕ ಸರ್ವೆ (Caste census) ಮಾಡುವಾಗ ಸಾವನ್ನಪ್ಪಿದ ಮೂರು ಸಿಬ್ಬಂದಿ ಕುಟುಂಬಕ್ಕೆ ಸರ್ಕಾರ ತಲಾ 20 ಲಕ್ಷ ರೂ. ಪರಿಹಾರ (Compensation) ಘೋಷಿಸಿದೆ. ಸಿಎಂ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧಿಕಾರಿಗಳ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶಿಕ್ಷಕರು ಸಮೀಕ್ಷೆ ಕಾರ್ಯ ಮುಗಿಸುವ ಭರವಸೆಯನ್ನು ಕೊಟ್ಟಿದ್ದಾರೆ. ಸಮೀಕ್ಷೆ ಮಾಡಲು ಹಿಂದೇಟು ಹಾಕಿದವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು. ಇನ್ನು ಸಮೀಕ್ಷೆ ಮಾಡುವವರಿಗೆ ಸೂಕ್ತ ರಕ್ಷಣೆ ನೀಡಲಾಗುವುದು ಎಂದು ತಿಳಿಸಿದರು.

Loading...
Unable to load recommendations.
Follow Us