AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಹೀಲ್ ಚೇರ್​​ನಲ್ಲಿ ಆಗಮಿಸಿ ಕರ್ನಾಟಕ ಇಂಟರ್​ನ್ಯಾಷನಲ್ ಟ್ರಾವೆಲ್ ಎಕ್ಸ್​ಪೋಗೆ ಚಾಲನೆ ನೀಡಿದ ಸಿದ್ದರಾಮಯ್ಯ

ವ್ಹೀಲ್ ಚೇರ್​​ನಲ್ಲಿ ಆಗಮಿಸಿ ಕರ್ನಾಟಕ ಇಂಟರ್​ನ್ಯಾಷನಲ್ ಟ್ರಾವೆಲ್ ಎಕ್ಸ್​ಪೋಗೆ ಚಾಲನೆ ನೀಡಿದ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Feb 26, 2025 | 9:14 PM

Share

ಕರ್ನಾಟಕ ಇಂಟರ್​ನ್ಯಾಷನಲ್ ಟ್ರಾವೆಲ್ ಎಕ್ಸ್​ಪೋ ಕಾರ್ಯಕ್ರಮವನ್ನು ಉದ್ಘಾಟಿಸುವ ಮೊದಲು ಸಿದ್ದರಾಮಯ್ಯ ಅವರನ್ನು ಸನ್ಮಾನಿಸಲಾಯಿತು. ಕಾನೂನು ಸಚಿವ ಹೆಚ್ ಕೆ ಪಾಟೀಲ್ ಮುಖ್ಯಮಂತ್ರಿಗೆ ಹೂ ಮಾಲೆ ಹಾಕಿದರೆ ಅಧಿಕಾರಿಯೊಬ್ಬರು 12ನೇ ಶತಮಾನದ ಸಮಾಜ ಸುಧಾರಕ, ಸಮಾನತೆಯ ಪ್ರತಿಪಾದಕ ಜಗಜ್ಯೋತಿ ಬಸವಣ್ಣನವರ ಪೋರ್ಟೇರ್ಟ್ ನೀಡಿ ಗೌರವಿಸಿದರು.

ಬೆಂಗಳೂರು, ಫೆ. 26: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇಂದು ನಗರದ ಖಾಸಗಿ ಹೋಟೆಲೊಂದರಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕ ಇಂಟರ್​ನ್ಯಾಷನಲ್ ಟ್ರಾವೆಲ್ ಎಕ್ಸ್​ಪೋಗೆ ಚಾಲನೆ ನೀಡಿದರು. ಎರಡು ವಾರಗಳಿಗೂ ಹೆಚ್ಚಿನ ಅವಧಿಯಿಂದ ಮಂಡಿನೋವಿಗೆ ತುತ್ತಾಗಿರುವ ಮುಖ್ಯಮಂತ್ರಿ ವೈದ್ಯರ ಸಲಹೆ ಮೇರೆಗೆ ವ್ಹೀಲ್ ಚೇರ್ ಮೇಲೆ ಕೂತ್ಕೊಂಡೇ ಓಡಾಟ ನಡೆಸಿದ್ದಾರೆ. ಇಲ್ಲಿ ನಡೆದ ಕಾರ್ಯಕ್ರಕಮಕ್ಕೂ ಅವರು ವ್ಹೀಲ್ ಚೇರ್​​​​ನಲ್ಲಿ ಅಗಮಿಸಿದರು. ಸಚಿವ ಕೆಹೆಚ್ ಮುನಿಯಪ್ಪ, ಹೆಚ್ ಕೆ ಪಾಟೀಲ್, ಶಾಸಕರಾದ ರಿಜ್ವಾನ್ ಅರ್ಷದ್ ಮತ್ತು ಪರಿಷತ್ ಸದಸ್ಯ ಕೆ ಗೋವಿಂದರಾಜು ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಸಿಎಂ ಸಿದ್ದರಾಮಯ್ಯಗೆ ವಿಜಯೇಂದ್ರ ಬಹಿರಂಗ ಪತ್ರ: ಕುತೂಹಲ ಮೂಡಿಸಿದ ನಡೆ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.