ಮೈಸೂರು-ಟಿ.ನರಸೀಪುರ ರಸ್ತೆಯ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಕಾರು ತಪಾಸಣೆ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 01, 2024 | 7:42 PM

ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಮೈಸೂರು, ಏ.01: ಲೋಕಸಭೆ ಚುನಾವಣೆ(Lok sabha election) ಹಿನ್ನಲೆ ಯಾವುದೇ ಅಕ್ರಮ ನಡೆಯದಂತೆ ಚೆಕ್‌ಪೋಸ್ಟ್‌ಗಳನ್ನು ನಿರ್ಮಿಸಲಾಗಿದೆ. ಅದರಂತೆ ಇಂದು(ಏ.01) ಮೈಸೂರು-ಟಿ.ನರಸೀಪುರ ರಸ್ತೆಯ ಚಿಕ್ಕಹಳ್ಳಿ ಚೆಕ್‌ಪೋಸ್ಟ್‌ನಲ್ಲಿ ಸಿಎಂ ಸಿದ್ದರಾಮಯ್ಯ(siddaramaiah) ಹಾಗೂ ಸಚಿವ ಮಹದೇವಪ್ಪ ತೆರಳುತ್ತಿದ್ದ ಕಾರನ್ನು ನಿಲ್ಲಿಸಿ, ಅಧಿಕಾರಿಗಳು ಕಾರಿನಲ್ಲಿದ್ದ ಸೂಟಕೇಸ್, ಬ್ಯಾಗ್, ಡ್ಯಾಷ್ ಬೋರ್ಡ್ ಸೇರಿ ಎಲ್ಲಾ ಕಡೆಗಳಲ್ಲೂ ತಪಾಸಣೆ ನಡೆಸಿದ್ದಾರೆ. ಟಿ.ನರಸೀಪುರದಲ್ಲಿ ಕಾರ್ಯಕ್ರಮ ಮುಗಿಸಿ ತೆರಳುವಾಗ ತಪಾಸಣೆ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More