ಮಹಿಳೆಯರು 500 ಕೋಟಿ ಸಲ ಬಸ್​ಗಳಲ್ಲಿ ಸಂಚರಿಸಿದರೆಂದು ಸಂಭ್ರಮಿಸುವ ಸಿಎಂ ಸಾರಿಗೆ ನೌಕರಿಗಾಗಿ ಮರುಗಲಿಲ್ಲ: ಅನಂತ ಸುಬ್ಬಾರಾವ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 16, 2025 | 7:18 PM

ಮೊನ್ನೆ ಶಕ್ತಿ ಯೋಜನೆಯಡಿ 500 ಕೋಟಿ ಸಲ ಮಹಿಳೆಯರು ಸಂಚರಿಸಿದ್ದಾರೆ ಅಂತ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಮಲಿಂಗಾರೆಡ್ಡಿ ಸಂಭ್ರಮಿಸಿ ಬಸ್ಸು ಹತ್ತು ತಾವೇ ಟಿಕೆಟ್ ನೀಡಿದರು, ಅದರೆ ಕಳೆದ 2ವರ್ಷಗಳ ಅವಧಿಯಲ್ಲಿ ಸಾರಿಗೆ ನೌಕರರು ಅನುಭವಿಸಿದ ಕಷ್ಟಕಾರ್ಪಣ್ಯಗಳನ್ನು ಕೇಳುವ ಮನಸ್ಸು ಇವರಲ್ಲಿ ಯಾರಿಗೂ ಬರಲಿಲ್ಲ, ಪ್ರತಿ 4 ವರ್ಷಕ್ಕೊಮ್ಮೆ ನೌಕರರ ವೇತನ ಪರಿಷ್ಕರಣೆ ಆಗಲೇಬೇಕು ಎಂದು ಅನಂತ ಸುಬ್ಬಾರಾವ್ ಹೇಳಿದರು.

ಬೆಂಗಳೂರು, ಜುಲೈ 16: ಕರ್ನಾಟಕ ಸಾರಿಗೆ ಸಂಸ್ಥೆ ನಾಲ್ಕು ವಿಭಾಗಗಳ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಗಸ್ಟ್ 5 ರಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಿದ್ದಾರೆಂದು ಸಾರಿಗೆ ಸಂಘಟನೆಗಳ ಮುಖಂಡ ಅನಂತ್ ಸುಬ್ಬರಾವ್ (Anant Subbarao) ಹೇಳಿದರು. ಬಸವರಾಜ ಬೊಮ್ಮಾಯಿ ಅವರ ಸರ್ಕಾರ ಅಧಿಕಾರದಲ್ಲಿದ್ದಾಗ ಸಾರಿಗೆ ನೌಕರರು ಶೇಕಡ 25ರಷ್ಟು ವೇತನ ಹೆಚ್ಚಳ ಕೇಳಿದ್ದರೆ, ಶೇಕಡ 15ರಷ್ಟು ಮಾತ್ರ ನೀಡಲಾಗಿತ್ತು ಆದರೆ 38 ತಿಂಗಳ ಹಿಂಬಾಕಿಯನ್ನು ಸರ್ಕಾರ ನೀಡಿಲ್ಲ. 2024, ಜನವರಿ 1ರಿಂದಲೇ ಶೇಕಡ 25ರಷ್ಟು ವೇತನ ಹೆಚ್ಚಿಸಬೇಕೆಂದು ಅಗ್ರಹಿಸಿ ಡಿಸೆಂಬರ್ 31, 2023ರಂದು ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾದಾಗ ಸಿದ್ದರಾಮಯ್ಯ ಸರ್ಕಾರ ಹೆಚ್ಚಳ ಮಾಡುವ ಭರವಸೆ ನೀಡಿತ್ತು, ಅದರೆ ಇದುವರೆಗೆ ಹೆಚ್ಚಳ ಮಾಡಿಲ್ಲ ಎಂದು ಸುಬ್ಬಾರಾವ್ ಹೇಳಿದರು.

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸಭೆ ಬೆನ್ನಲ್ಲೇ ನಾಳೆಯ ಸಾರಿಗೆ ಮುಷ್ಕರ ಹಿಂಪಡೆದ ಜಂಟಿ ಕ್ರಿಯಾ ಸಮಿತಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.