Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೇ..ಏನಾಯ್ತು..!ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ

ಅರೇ..ಏನಾಯ್ತು..!ವ್ಹೀಲ್​ ಚೇರ್​ನಲ್ಲಿ ಇನ್ವೆಸ್ಟ್ ಕರ್ನಾಟಕ ಸಮಾವೇಶಕ್ಕೆ ಬಂದ ಸಿಎಂ

ರಮೇಶ್ ಬಿ. ಜವಳಗೇರಾ
|

Updated on: Feb 11, 2025 | 5:46 PM

ಇಂದು ಕೇಂದ್ರ ರಕ್ಷಣಾ ಸಚಿವ ಇನ್ವೆಸ್ಟ್ ಕರ್ನಾಟಕ 2025ಕ್ಕೆ ಚಾಲನೆ ನೀಡಿದರು, ಇನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಮಾವೇಶಕ್ಕೆ ಆಗಮಿಸಿದ್ದು, ವೇದಿಕೆಗೆ ವ್ಹೀಲ್​ ಚೇರ್​ನಲ್ಲೇ ಬಂದಿದ್ದಾರೆ. ಮಂಡಿನೋವಿನಿಂದ ಬಳಲುತ್ತಿದ್ದಾರೆ. ಹೀಗಾಗಿ ವ್ಹೀಲ್​ ಚೇರ್​ ಮೂಲಕ ಬಂದು ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಪಾಲ್ಗೊಂಡರು.

ಬೆಂಗಳೂರು, (ಫೆಬ್ರವರಿ 11): ಬೆಂಗಳೂರಿನ ಅರಮನೆ ಮೈದಾನದಲ್ಲಿಂದು (ಫೆಬ್ರವರಿ 11) ಇನ್ವೆಸ್ಟ್ ಕರ್ನಾಟಕ 2025ರ ಸಮ್ಮಿಟ್ ಗೆ ಚಾಲನೆ ಸಿಕ್ಕಿದೆ. ಬೃಹತ್ ಕೈಗಾರಿಕಾ ಇಲಾಖೆ ಅಡಿಯಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದರು. ಇನ್ನು ಈ ಸಮಾವೇಶಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ವ್ಹೀಲ್​ ಚೇರ್​ನಲ್ಲಿ ಬಂದು ಗಮನಸೆಳೆದರು. ಮಂಡಿನೋವಿನಿಂದ ಬಳಲುತ್ತಿರುವ ಸಿದ್ದರಾಮಯ್ಯನವರು ಮೊನ್ನೆ ಅಷ್ಟೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದುಕೊಂಡಿದ್ದು, ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯಬೇಕೆಂದು ವೈದ್ಯರು ಸಲಹೆ ನೀಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಬಜೆಟ್​ ಪೂರ್ವ ಸಿದ್ಧತೆ ಸಭೆಗಳನ್ನು ಕಾವೇರಿ ನಿವಾಸದಲ್ಲೇ ಮಾಡಿದ್ದರು. ಇದೀಗ ಇನ್ವೆಸ್ಟ್ ಕರ್ನಾಟಕ ಸಮಾವೇಶದ ವೇದಿಕೆಗೆ ವ್ಹೀಲ್ ಚೇರ್​ನಲ್ಲೇ ಬಂದಿದ್ದಾರೆ.