CM congratulates the Speaker: ವಿಧಾನಸಭಾಧ್ಯಕ್ಷರ ಸ್ಥಾನ ಅಲಂಕರಿಸಿದ ಯುಟಿ ಖಾದರ್​ರನ್ನು ಅಭಿನಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: May 24, 2023 | 1:42 PM

ತಮ್ಮ ಮಂತ್ರಿಮಂಡಲದಲ್ಲಿ ಖಾದರ್ ಸಚಿವರಾಗಿ ಕೆಲಸ ಮಾಡಿದ್ದನ್ನು ಸಹ ಸಿದ್ದರಾಮಯ್ಯ ಸದನದ ಗಮನಕ್ಕೆ ತಂದರು.

ಬೆಂಗಳೂರು: 16ನೇ ವಿಧಾನ ಸಭೆಯ ಸ್ಪೀಕರ್ ಅಗಿ ಅವಿರೋಧ ಆಯ್ಕೆಯಾದ ಯುಟಿ ಖಾದರ್ (UT Khader) ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸದನದ ಪರವಾಗಿ ಮತ್ತು ವೈಯಕ್ತಿಕವಾಗಿ ಅಭಿನಂದಿಸಿದರು. ಖಾದರ್ ಅವರು ವಿಧಾನಸಭಾ ಸ್ಪೀಕರ್ ಸ್ಥಾನವನ್ನು ಅಲಂಕರಿಸಿದ ಮುಸ್ಲಿಂ ಸಮುದಾಯದ (Muslim community) ಮೊದಲ ನಾಯಕರಾಗಿದ್ದಾರೆ. ರಾಜಕಾರಣದ ಕುಟುಂಬದ ಹಿನ್ನೆಲೆಯ ಖಾದರ್ ಅವರ ತಂದೆ ಯುಟಿ ಫರೀದ್ ಸಹ ಶಾಸಕರಾಗಿದ್ದನ್ನು ಮುಖ್ಯಮಂತ್ರಿಗಳು ಸ್ಮರಿಸಿದರು. ತಂದೆಯ ನಿಧನದ ಬಳಿಕ ಖಾದರ್ ಉಳ್ಳಾಲ ಕ್ಷೇತ್ರದಿಂದ ವಿಧಾನಸಭೆಗೆ 5 ಬಾರಿ ಅಯ್ಕೆಯಾಗಿರುವರೆಂದು ಹೇಳಿದ ಸಿದ್ದರಾಮಯ್ಯ, ತಮ್ಮ ಮಂತ್ರಿಮಂಡಲದಲ್ಲಿ ಸಚಿವರಾಗಿ ಕೆಲಸ ಮಾಡಿದ್ದನ್ನು ಸಹ ಸದನದ ಗಮನಕ್ಕೆ ತಂದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.