ಬುಡಕಟ್ಟು ಜನರೊಂದಿಗೆ ನೃತ್ಯ ಮಾಡಿದ ಸಿಎಂ ಸಿದ್ದರಾಮಯ್ಯ

ವಿವೇಕ ಬಿರಾದಾರ

Updated on: Nov 13, 2024 | 7:20 AM

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನಲ್ಲಿನ ಉದ್ಭೂರುಹಾಡಿ ಮತ್ತು ಕೆರೆಹಾಡಿಗೆ ಭೇಟಿ ನೀಡಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬುಡಕಟ್ಟು ಜನರೊಂದಿಗೆ ಹೆಜ್ಜೆ ಹಾಕಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಮೈಸೂರು ಜಿಲ್ಲೆಯ ಹೆಚ್​ಡಿ ಕೋಟೆ ತಾಲೂಕಿನಲ್ಲಿನ ಉದ್ಭೂರುಹಾಡಿ ಮತ್ತು ಕೆರೆಹಾಡಿಗೆ ಭೇಟಿ ನೀಡಿದರು. ಈ ವೇಳೆ ಹಾಡಿಯ ನಿವಾಸಿಗಳು ಸಾಂಪ್ರದಾಯಿಕ ನೃತ್ಯದ ಮೂಲಕ ಸಿಎಂ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದರು. ಈ ವೇಳೆ ನೃತ್ಯ ನೋಡುತ್ತಿದ್ದ ಸಿದ್ದರಾಮಯ್ಯ ಬಳಿಕ ತಾವೇ ಕೆಲ ಹೊತ್ತು ಹಾಡಿಯ ಸಾಂಪ್ರದಾಯಿಕ ನೃತ್ಯಕ್ಕೆ ಕೋಲಾಟದ ಕೋಲು ಹಿಡಿದು ಹೆಜ್ಜೆ ಹಾಕಿದರು.

Follow Us
Vivek Biradar

ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್​ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.